ಅ.14: ದಸಂಸ(ಅಂಬೇಡ್ಕರ್ವಾದ) ಜಿಲ್ಲಾ ಸಮಿತಿ ಸಭೆ
ಉಡುಪಿ, ಅ.10: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ರಾಜ್ಯ ಸಮಿತಿಯು ರೂಪಿಸಿದ ಕಾರ್ಯಕ್ರಮಗಳನ್ನು ಹಾಗೂ ಉಡುಪಿ ಜಿಲ್ಲಾ ಸಮಿತಿಯ ಸರ್ವ ಸದಸ್ಯರ ಸಭೆ ಜರಗಿಸುವ ಬಗ್ಗೆ ದಸಂಸ ಉಡುಪಿ ಜಿಲ್ಲಾ ಸಮಿತಿ ಸಭೆಯನ್ನು ಅ.14ರ ಅಪರಾಹ್ನ 3 ಗಂಟೆಗೆ ಆದಿವುಡುಪಿಯ ಜಿಲ್ಲಾ ಅಂಬೇಡ್ಕರ್ ಭವನದಲ್ಲಿ ಕರೆಯಲಾಗಿದೆ.
ಈ ಸಭೆಯಲ್ಲಿ ಮೂರೂ ತಾಲೂಕಿನ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಭಾಗವಹಿಸಬೇಕಾಗಿ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ತರ್ ತಿಳಿಸಿದ್ದಾರೆ.
Next Story