ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವುದಿಲ್ಲ: ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್
ಬೆಂಗಳೂರು, ಫೆ. 3: ರಾಜ್ಯದಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡುವುದಿಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಹೇಳಿದ್ದಾರೆ.
ರವಿವಾರ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ಮೈತ್ರಿ ಸರಕಾರ ತನ್ನಿಂದಾಗಿಯೇ ಬೀಳುವವರೆಗೂ ಬಿಜೆಪಿ ಏನೂ ಮಾಡಲು ಹೋಗುವುದಿಲ್ಲ. ಸರಕಾರದ ಆಂತರಿಕ ಬೇಗುದಿಯಿಂದ ರಾಜ್ಯದ ಜನತೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಟೀಕಿಸಿದರು.
ಮೈತ್ರಿ ಶಾಸಕರೇ ಸರಕಾರದ ಆಡಳಿತ ವೈಖರಿಯ ಬಗ್ಗೆ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ರೈತರ ಬಗ್ಗೆ ಯಾವುದೇ ಕಳಕಳಿ ಇಲ್ಲ. ತನ್ನ ಆಂತರೀಕ ಜಗಳದಿಂದ ಸರಕಾರದ ಬಿದ್ದರೆ ಮುಂದಿನ ತೀರ್ಮಾನವನ್ನು ಪಕ್ಷದ ಅಧ್ಯಕ್ಷರು ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
Next Story