ಬಸ್ ಢಿಕ್ಕಿ: ಪಾದಾಚಾರಿ ಮೃತ್ಯು
ಮಲ್ಪೆ, ಮಾ.8: ಮಲ್ಪೆಯ ವಡಭಾಂಡೇಶ್ವರ ಕೆಇಬಿ ಕಛೇರಿಯ ಬಳಿಯ ತಿರುವಿನಲ್ಲಿ ಇಂದು ಬೆಳಗ್ಗೆ 10.30ರ ಸುಮಾರಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ವಿಠಲ ಪೂಜಾರಿ(60) ಎಂದು ಗುರುತಿಸಲಾಗಿದೆ.
ಬಲಾರಾಮ ಜಂಕ್ಷನ್ ಕಡೆಯಿಂದ ಮಲ್ಪೆಜಂಕ್ಷನ್ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವಿಠಲ ಪೂಜಾರಿಗೆ ಎದುರಿನಿಂದ ಬಂದ ಟಿಎಂಟಿ ಬಸ್ ಢಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಮಂಗಳೂರು ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ 11.20ರ ಸುಮಾರಿಗೆ ಮೃತಪಟ್ಟರು.
ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story