ಹೆಮ್ಮಾಡಿ ಒಂಟಿ ಮಹಿಳೆ ಕೊಲೆ: ಓರ್ವ ವಶಕ್ಕೆ
ಕುಂದಾಪುರ, ಮಾ.8: ಕಟ್ಬೇಲ್ತೂರು ಗ್ರಾಮದ ಹೆಮ್ಮಾಡಿ ಸಮೀಪದ ಹರೆಗೋಡು ನಿವಾಸಿ ಗುಲಾಬಿ ಮೊಗವೀರ (55) ಎಂಬವರನ್ನು ಕತ್ತು ಹಿಸುಕಿ ಉಸಿರು ಗಟ್ಟಿಸಿ ಕೊಲೆಗೈದಿರುವ ಪ್ರಕರಣಕ್ಕೆ ಸಂಬಂಧಿಸಿ ಓರ್ವನನ್ನು ಕುಂದಾಪುರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸ್ಥಳೀಯನಾಗಿರುವ ಈತನನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಪೊಲೀಸರು ಈ ಕೊಲೆ ಪ್ರಕರಣದಲ್ಲಿ ಇತರರು ಭಾಗಿಯಾಗಿದ್ದಾರೆಯೇ ಎಂಬ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಕೊಲೆಗೆ ಬಡ್ಡಿ ವ್ಯವಹಾರವೇ ಕಾರಣ ಎಂಬುದು ತಿಳಿದುಬಂದಿದೆ. ಹಣ ಕೇಳಲು ಹೋದಾಗ ಈ ಕೊಲೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.
Next Story