ಪಾಕ್ನಲ್ಲಿರುವ ಭಾರತೀಯ ಕೈದಿಗಳ ಬಿಡುಗಡೆಗೆ ಪ್ರಯತ್ನ: ಮಂಗಳೂರಿನಲ್ಲಿ ರಾಜನಾಥ್ ಸಿಂಗ್
ಮಂಗಳೂರು, ಮಾ. 9: ಪಾಕಿಸ್ತಾನದಲ್ಲಿ ಕೈದಿಗಳಾಗಿರುವ ಎಲ್ಲ ಭಾರತೀಯರ ಬಿಡುಗಡೆಗೂ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಮಂಗಳೂರಿನಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದರು.
ನಗರದ ಹೊಟೇಲ್ ನಲ್ಲಿ ಮಧ್ಯಾಹ್ನ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
74 ಮಂದಿ ಬಂಧಿತರ ಬಿಡುಗಡೆಗೆ ವಿವಿಧ ಹಂತದಲ್ಲಿ ಪ್ರಯತ್ನ ನಡೆಯುತ್ತಿದೆ ಎಂದು ಅವರು ಹೇಳಿದರು. ಪುಲ್ವಾಮ ಘಟನೆ ಬಳಿಕ ಪಾಕಿಸ್ತಾನದ ಜತೆ ಕ್ರಿಕೆಟ್ ಸಂಬಂಧ ಕಡಿದು ಹಾಕಬೇಕು ಎಂಬ ಬೇಡಿಕೆ ಕುರಿತು ಯಾವುದೇ ನಿರ್ಧಾರ ಆಗಿಲ್ಲ ಎಂದು ಅವರು ಹೇಳಿದರು.
Next Story