ಇಂದ್ರಾಳಿ: ಉಚಿತ ಆರೋಗ್ಯ ತಪಾಸಣಾ ಶಿಬಿರ
ಉಡುಪಿ, ಮಾ.10: ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಣಿಪಾಲ ಹಾಗೂ ಜಿಲ್ಲಾ ಅಂಧತ್ವ ನಿವಾರಣಾ ಘಟಕ, ಪ್ರಗತಿ ಯುವಕ ಸಂಘ, ಪ್ರಗತಿ ಮಹಿಳಾ ಮಂಡಳಿ ಇಂದ್ರಾಳಿ ಇವರ ಸಹಭಾಗಿತ್ವದಲ್ಲಿ ಇಂದ್ರಾಳಿ ಅಂಬೇಡ್ಕರ್ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ನಗರಸಭಾ ಸದಸ್ಯೆ ಕಲ್ಪನಾ ಸುಧಾಮ ಶಿಬಿರವನ್ನು ಉದ್ಘಾಟಿಸಿದರು. ಸ್ಥಳೀಯ ನಗರಸಭಾ ಸದಸ್ಯ ಅಶೋಕ್ ನಾಯ್ಕಾ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜನರಲ್ ಮ್ಯಾನೆಜರ್ ಜಯಕರ್ ಶೆಟ್ಟಿ ಇಂದ್ರಾಳಿ, ಜಿಲ್ಲಾ ಅಂಧತ್ವ ನಿವಾರಣಾ ಘಟಕದ ನೇತ್ರತಜ್ಞ ಡಾ. ನಿತ್ಯಾನಂದ ನಾಯಕ್, ನಗರ ಸಭೆಯ ಮಾಜಿ ಉಪಾಧ್ಯಕ್ಷ ಕುಶಲ್ ಶೆಟ್ಟಿ, ಇಂದ್ರಾಳಿ ಪ್ರಗತಿ ಪ್ರಗತಿ ಯುವಕ ಸಂಘದ ಅಧ್ಯಕ್ಷ ರತ್ನಾಕರ್ ಇಂದ್ರಾಳಿ, ಇಂದ್ರಾಳಿ ಪ್ರಗತಿ ಮಹಿಳಾ ಮಂಡಳಿಯ ಅಧ್ಯಕ್ಷೆ ಚಂದ್ರಕಲಾ ಸುರೇಶ್, ಇಂದ್ರಾಳಿ ವಿಶ್ವಾಸ್ ಕ್ರಿಕೆಟರ್ಸ್ ಅಧ್ಯಕ್ಷ ರಮೇಶ್ ಉಪಸ್ಥಿತರಿದ್ದರು.
ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ.ನಾಗರತ್ನ ಸ್ವಾಗತಿಸಿ, ಪ್ರಸ್ತಾವನೆ ಮಾತನಾಡಿದರು. ಉಡುಪಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ರಂಜಿತ್ ಕುಮಾರ್ ನಿರೂಪಿಸಿದರು, ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ವಿದ್ಯಾ ವಂದಿಸಿದರು. ಶಿಬಿರದಲ್ಲಿ 100ಕ್ಕೂ ಅಧಿಕ ಪಲಾನುಭವಿಗಳನ್ನು ಪರೀಕ್ಷಿಸಿ ಔಷದೋಪಚಾರ ನೀಡಲಾಯಿತು.