ಪರ್ಪುಂಜ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ
ಪುತ್ತೂರು: ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮ ಪರ್ಪುಂಜ ಎಂಬಲ್ಲಿ ಸೋಮವಾರ ನಡೆದಿದೆ.
ಇಲ್ಲಿನ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಶಿವಪ್ರಸಾದ್ ಎಂಬವರ ಪತ್ನಿ ಲಕ್ಷ್ಮೀ (21) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅವರು ಮಂಗಳೂರಿನಲ್ಲಿ ಹೋಮ್ ನರ್ಸ್ ಆಗಿ ಕೆಲಸ ಮಾಡಿಕೊಂಡದ್ದರು. ಮಾ.10 ರಂದು ಮಂಗಳೂರಿನಿಂದ ಕೆಲಸ ಮುಗಿಸಿಕೊಂಡು ಬಂದವರು ಪುತ್ತೂರು ಬಸ್ಸು ನಿಲ್ದಾಣದಲ್ಲಿ ತನ್ನ ಅತ್ತೆ ಮಾವರೊಂದಿಗೆ ಮಾತುಕತೆ ನಡೆಸಿ ಬಳಿಕ ಪರ್ಪುಂಜದ ಮನೆಗೆ ಬಂದಿದ್ದರು. ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಲಕ್ಷ್ಮೀಯವರ ಸಹೋದರ ಸಂಪ್ಯ ಠಾಣೆಗೆ ದೂರು ನೀಡಿದ್ದು ಸಾವಿನಲ್ಲಿ ಸಂಶಯ ಇದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಸಂಪ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story