ಉಡುಪಿ: ಮಹಿಳಾ ಮಂಡಳಿಗಳ ಒಕ್ಕೂಟದಿಂದ ಮಹಿಳಾ ದಿನಾಚರಣೆ
ಉಡುಪಿ, ಮಾ.12: ಉಡುಪಿ ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ, ಬಡಗಬೆಟ್ಟು ಕ್ರೆಡಿಟ್ ಕೆೋಆಪರೇಟಿವ್ ಸೊಸೈಟಿ ಹಾಗೂ ಮಲ್ಪೆಲಯನ್ಸ್ ಕ್ಲಬ್ಗಳ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆಯು ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಾಭವನದಲ್ಲಿ ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮವನ್ನು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಉದ್ಘಾಟಿಸಿದರು. ಬಡಗಬೆಟ್ಟು ಕ್ರೆಡಿಟ್ ಸೊಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನಾ, ಎಂಜಿಎಂ ಕಾಲೇಜಿನ ರಾಜ್ಯ ಶಾಸ್ತ್ರ ಪ್ರಾಧ್ಯಾಪಕ ಸುರೇಂದ್ರನಾಥ ಶೆಟ್ಟಿ, ಜಿಪಂ ಸದಸ್ಯೆ ಗೀತಾಂಜಲಿ ಎಂ. ಸುವರ್ಣ, ಕುಂದಾಪುರ ಮಹಿಳಾ ಒಕ್ಕೂಟದ ಅಧ್ಯಕ್ಷೆ ರಾಧದಾಸ್ ಮುಖ್ಯ ಅತಿಥಿಗಳಾಗಿದ್ಧರು.
ವೇದಿಕೆಯಲ್ಲಿ ಮಲ್ಪೆ ಲಯನ್ಸ್ ಕ್ಲಬ್ ಅಧ್ಯಕ್ಷೆ ವಿಜಯಾ ಗೋಪಾಲ್ ಬಂಗೇರ, ಕಾರ್ಯದರ್ಶಿ ಜಯಲಕ್ಷೀ ಬೆನಗಲ್ ನಾಗಪ್ಪಅಮೀನ್, ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಉಪಾಧ್ಯಕ್ಷೆ ಸುಷ್ಮಾ ಎನ್.ಶೆಟ್ಟಿ, ಸುಪ್ರಭ ಆಚಾರ್ಯ, ಜೊತೆ ಕಾರ್ಯದರ್ಶಿ ಗೀತಾ ರವಿ ಉಪಸ್ಥಿತರಿದ್ದರು.
ಲಯನ್ ಜಿಲ್ಲೆ 317ರ ಪ್ರಥಮ ಮಹಿಳೆ ಗಿರಿಜಾ ತಲ್ಲೂರು ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟದ ಅಧ್ಯಕ್ಷೆ ಶೀಲಾ ಕೆ.ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಯಶೋಧಾ ಜೆ.ಶೆಟ್ಟಿ ಸ್ವಾಗತಿಸಿದರು. ಪ್ರಸನ್ನ ಭಟ್ ಕಾರ್ಯಕ್ರಮ ನಿರೂಪಿಸಿ ದರು.