ತೆಂಕನಿಡಿಯೂರು: ಪುಸ್ತಕ ಬಿಡುಗಡೆ
ಉಡುಪಿ, ಮಾ.14: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಸುರೇಶ್ ರೈ ಅವರ 19ನೇ ಕೃತಿ ‘ಎ ಮಿನುಸ್ಕೂಲ್ ಲುಕ್ ಆನ್ ವಿಜಯನಗರ’ವನ್ನು ಇತ್ತೀಚೆಗೆ ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕಿ ಪ್ರೊ. ಪಾರ್ವತಿ ಐತಾಳ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಪಂ ಸದಸ್ಯ ಜನಾರ್ಧನ್ ತೋನ್ಸೆ, ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ, ತೆಂಕನಿಡಿಯೂರು ಗ್ರಾಪಂ ಅಧ್ಯಕ್ಷ ಕೃಷ್ಣ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ದಯಾನಂದ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿು ಪದಾಧಿಕಾರಿಗಳು ಉಪಸ್ಥಿತರಿದ್ದರು.
Next Story