ಜೆಡಿಎಸ್ ಅಭ್ಯರ್ಥಿ ಸ್ಪರ್ಧೆಗೆ ವಿರೋಧ: ಉಡುಪಿ ಕಾಂಗ್ರೆಸ್ ಕಾರ್ಯಕರ್ತರಿಂದ ಟಯರ್ ಗೆ ಬೆಂಕಿ ಹಾಕಿ ಆಕ್ರೋಶ
ಉಡುಪಿ, ಮಾ. 14: ಉಡುಪಿ - ಚಿಕ್ಕಮಗಳೂರು ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆಗೆ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ಕಾರ್ಯಕರ್ತರು ಟಯರ್ ಗೆ ಬೆಂಕಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ.
ಚಿಕ್ಕಮಗಳೂರು ಇಂದಿರಾಗಾಂಧಿಗೆ ಮರುಜನ್ಮ ಕೊಟ್ಟ ಕ್ಷೇತ್ರ, ಆಸ್ಕರ್ ಫೆರ್ನಾಂಡೀಸ್ ಸತತವಾಗಿ ಗೆದ್ದ ಕ್ಷೇತ್ರ ಉಡುಪಿಯಾಗಿದೆ. ಮೈತ್ರಿ ನಿರ್ಧಾರದಿಂದ ಅವಮಾನವಾಗಿದೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾರ್ಯಕರ್ತರ ಆಗ್ರಹಿಸುವುದಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ ಅಮಿನ್ ತಿಳಿಸಿದ್ದಾರೆ.
Next Story