ಪಿಪಿಸಿಯಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ
ಉಡುಪಿ, ಮಾ.15: ಡಾ. ಎನ್.ಕೆ.ತಿಂಗಳಾಯ ಸ್ಮಾರಕ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಎ.8 ರಂದು ನಡೆಯಲಿದೆ.
ಮಂಗಳೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಉಪನ್ಯಾ ಸಕರ ಒಕ್ಕೂಟ ಮತ್ತು ಪೂರ್ಣಪ್ರಜ್ಞ ಕಾಲೇಜಿನ ಜಂಟಿ ಆಶ್ರಯದಲ್ಲಿ ‘ಗ್ರಾಮೀಣ ಬಡವರಿಗಾಗಿ ಬ್ಯಾಂಕಿಂಗ್’ ಎಂಬ ವಿಷಯದ ಕುರಿತು ಈ ಸಂಕಿರಣವು ನಡೆಯಲಿದ್ದು, ಬ್ಯಾಂಕಿಂಗ್ ಮತ್ತು ಶೈಕ್ಷಣಿಕ ಕ್ಷೇತ್ರದ ವಿದ್ವಾಂಸರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಲಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯ ಅರ್ಥಶಾಸ್ತ್ರ ಉಪನ್ಯಾ ಸಕರ ಒಕ್ಕೂಟ ಮತ್ತು ಪೂರ್ಣಪ್ರಜ್ಞ ಕಾಲೇಜಿನ ಜಂಟಿ ಆಶ್ರಯದಲ್ಲಿ ‘ಗ್ರಾಮೀಣ ಬಡವರಿಗಾಗಿ ಬ್ಯಾಂಕಿಂಗ್’ ಎಂಬ ವಿಷಯದ ಕುರಿತು ಈ ಸಂಕಿರಣವು ನಡೆಯಲಿದ್ದು, ಬ್ಯಾಂಕಿಂಗ್ ಮತ್ತು ಶೈಕ್ಷಣಿಕ ಕ್ಷೇತ್ರದ ವಿದ್ವಾಂಸರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಲಿದ್ದಾರೆ. ಸಿಂಡಿಕೇಟ್ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಈ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಇಚ್ಛಿಸುವ ಆಸಕ್ತ ಉಪನ್ಯಾಸಕರಿಗೆ ಪ್ರಬಂಧ ಮಂಡಿಸುವ ಅವಕಾಶವನ್ನು ನೀಡಲಾಗಿದೆ.
ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಸಿಎಂಡಿ ಆಗಿರುವ ಡಾ.ಎನ್.ಕೆ.ತಿಂಗಳಾಯ ಅವರು ಮಂಗಳೂರು ವಿ.ವಿ. ಅರ್ಥಶಾಸ್ತ್ರ ಉಪನ್ಯಾಸಕರ ಒಕ್ಕೂಟ ಸ್ಥಾಪನೆಯಲ್ಲಿ ಪ್ರಧಾನ ಪಾತ್ರ ವಹಿಸಿದ್ದರು ಎಂದು ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.