ಮಾ.18ರಂದು ದಶಮಾನೋತ್ಸವ ಉಪನ್ಯಾಸ ಕಾರ್ಯಕ್ರಮ
ಉಡುಪಿ, ಮಾ.16: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾನಿಲಯದ ದಶಮಾನೋತ್ಸವ ಉಪನ್ಯಾಸ ಕಾರ್ಯಕ್ರಮವನ್ನು ಉಡುಪಿ ವೈಕುಂಠ ಬಾಳಿಗಾ ಕಾನೂನು ಕಾಲೇಜಿನಲ್ಲಿ ಮಾ.18ರಂದು ಬೆಳಗ್ಗೆ 10 ಗಂಟೆಗೆ ಆಯೋಜಿಸ ಲಾಗಿದೆ.
ಕರ್ನಾಟಕ ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ‘ಸಾಮಾಜಿಕ ವೌಲ್ಯಗಳ ಅಧಃಪತನ ಹಾಗೂ ಅದರ ಪರಿಣಾಮಗಳು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿರುವರು ಎಂದು ಕಾಲೇಜಿನ ಪ್ರಾಂಶು ಪಾಲ ಪ್ರೊ.ಡಾ.ಪ್ರಕಾಶ್ ಕಣಿವೆ ಸುದ್ದಿಗೋಷ್ಟಿಯಲ್ಲಿಂದು ತಿಳಿಸಿದ್ದಾರೆ.
ಅಧ್ಯಕ್ಷತೆಯನ್ನು ರಾಜ್ಯ ಕಾನೂನು ವಿವಿಯ ಉಪಕುಲಪತಿ ಪ್ರೊ.ಪಿ.ಈಶ್ವರ ಭಟ್ ವಹಿಸಲಿರುವರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಟಿ. ಅಶೋಕ್ ಪೈ ಅತಿಥಿಯಾಗಿರುವರು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಪದವಿ ಕಾಲೇಜು ಹಾಗೂ ಹಾಸನ, ಚಿಕ್ಕಮಗಳೂರು, ಮಂಗಳೂರು, ಪುತ್ತೂರು, ಸುಳ್ಯ ಕಾನೂನು ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಲಿರುವರು.
ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಶ್ರೀನಿವಾಸ ಪ್ರಸಾದ್ ಉಪಸ್ಥಿತರಿದ್ದರು.
Next Story