ಕಾಂಗ್ರೆಸ್ ಕಾರ್ಯಕರ್ತರು ದಿಗಿಲುಗೊಳ್ಳಬಾರದು: ಡಾ.ವಿಜಯಕುಮಾರ್
ಉಡುಪಿ, ಮಾ.16: ಕಳೆದ ನಾಲ್ಕಾರು ದಿನಗಳಿಂದ ಉಡುಪಿ ಚಿಕ್ಕಮಗ ಳೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕ ರುಗಳು ಭ್ರಮೆನಿರಸಗೊಂಡಿದ್ದಾರೆ. ರಾಷ್ಟ್ರ ರಾಜಕಾರಣ ಹಿನ್ನೆಲೆಯಲ್ಲಿ ಇಂತಹ ಸ್ಥಿತಿ ಬಂದೊದಗಿದ್ದು, ಇದನ್ನು ಅರ್ಥಮಾಡಿಕೊಳ್ಳುವುದರ ಮೂಲಕ ಕಾರ್ಯ ಕರ್ತರು ದಿಗಿಲುಗೊಳ್ಳಬಾರದೆಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಡಿ.ಎಲ್. ವಿಜಯಕುಮಾರ್ ತಿಳಿಸಿದ್ದಾರೆ.
ಈಗಾಗಲೇ ನಾನೂ ಸೇರಿದಂತೆ ನಮ್ಮ ಎರಡು ಜಿಲ್ಲೆಯ ನಾಯಕರುಗಳು ರಾಜ್ಯ ಹಾಗೂ ಎಐಸಿಸಿ ಪ್ರಮುಖರಿಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧೆಗೆ ಅವಕಾಶ ಮಾಡಿಕೊಡಬೇಕು ಎಂಬ ಬಗ್ಗೆ ಒತ್ತಾಯಿಸಿದ್ದೇವೆ. ಇಂದಿರಾಗಾಂಧಿಗೆ ರಾಜಕೀಯ ಮರುಜನ್ಮ ನೀಡಿದ ಈ ಕ್ಷೇತ್ರ ಭಾವನಾತ್ಮಕ ದೃಷ್ಠಿಯಲ್ಲಿದೆ. ಜಾತ್ಯಾತೀತ ಜನತಾದಳಕ್ಕಿಂತಲೂ ಶಕ್ತಿಯುತ ವಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ನವರ ಒತ್ತಡ, ಜೆಡಿಎಸ್ನವರ ವಾಸ್ತವ ಮಾತುಗಳು ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧೆಗೆ ಅವಕಾಶವಾಗಬಹುದು. ಆದುದರಿಂದ ಪಕ್ಷದ ಕಾರ್ಯ ಕರ್ತರು ಎದೆಗುಂದಬಾರದು ಮತ್ತು ಒತ್ತಾಯ ಇರಬೇಕೇ ಹೊರತು ಚಳುವಳಿಯ ಮೂಲಕ ಪಕ್ಷದ ಮುಖಂಡರುಗಳನ್ನು ನಿಂದಿಸುವ ಹೇಳಿಕೆಗಳನ್ನು ನೀಡಬಾರದು ಎಂದು ಅವರು ಮನವಿ ಮಾಡಿದ್ದಾರೆ.