ಪೆರ್ಡೂರು ಜಾತ್ರಾ ಮಹೆತ್ಸವದ ಸಾಂಸ್ಕೃತಿಕ ಕಾರ್ಯಕ್ರಮ
ಪೆರ್ಡೂರು, ಮಾ.17: ಪೆರ್ಡೂರು ಶ್ರೀಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ರೋಟರಿ ಕ್ಲಬ್ ಪೆರ್ಡೂರು ಹಾಗೂ ಪೆರ್ಡೂರು ಯುವಕ ಸಂಘದ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ವನ್ನು ಮಾ.15ರಂದು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಪೆರ್ಡೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಮೋದ್ ರೈ ಪಳಜೆ ಉದ್ಟಾಟಿಸಿದರು. ಪೆರ್ಡೂರು ರೋಟರಿ ಕ್ಲಬ್ನ ಅಧ್ಯಕ್ಷ ಸಂತೆಕಟ್ಟೆ ರಾಮದಾಸ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ದಲ್ಲಿ ಚಾಣಕ್ಯ ತಂಡದ ನಿರ್ದೇಶಕರು ಹಾಗೂ ಗಾಯಕರನ್ನು ಗೌರವಿಸ ಲಾಯಿತು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಹೆಬ್ರಿ ಉದಯಕುಮಾರ್ ಶೆಟ್ಟಿ, ಪೆರ್ಡೂರು ಯುವಕ ಸಂಘದ ಕಾರ್ಯದರ್ಶಿ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು. ಯುವಕ ಸಂಘದ ಅಧ್ಯಕ್ಷ ಸತೀಶ್ ಶೆಟ್ಟಿ ಸ್ವಾಗತಿಸಿದರು. ರೋಟರಿ ಕ್ಲಬ್ ಕಾರ್ಯದರ್ಶಿ ಜಯರಾಮ್ ಶೆಟ್ಟಿ ವಂದಿಸಿದರು. ಉಪೇಂದ್ರ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಚಾಣಕ್ಯ ಮೆಲೋಡಿಸ್ ಹೆಬ್ರಿ ತಂಡ ಹಾಗೂ ಟಿ.ವಿ.ರಿಯಾಲಿಟಿ ಶೋ ಗಳಲ್ಲಿ ಭಾಗವಹಿಸಿದ ಗಾಯಕರಿಂದ ಭಕ್ತಿಭಾವ ರಮಂಜರಿ ಕಾರ್ಯ ಕ್ರಮ ನಡೆಯಿತು.