ತಲಪಾಡಿ: ಗಾಂಜಾ ಸಾಗಾಟ; ಓರ್ವ ಸೆರೆ
ಉಳ್ಳಾಲ: ಕೇರಳ ಭಾಗದಿಂದ ಗಾಂಜಾ ಖರೀದಿಸಿ ಮಂಗಳೂರು ಕಡೆಗೆ ಮಾರಾಟ ಮಾಡಲೆಂದು ತರುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ದ್ವಿಚಕ್ರ ವಾಹನ ಸೇರಿದಂತೆ ಆರೋಪಿಯನ್ನು ತಲಪಾಡಿಯಲ್ಲಿ ಬಂಧಿಸಿದ್ದಾರೆ.
ಕೆ.ಸಿ ರೋಡು ನಿವಾಸಿ ಮುನಾವರ್ (32) ಬಂಧಿತ ಆರೋಪಿ. ಈತನ ಬಳಿಯಿದ್ದ ಒಂದು ಕೆ.ಜಿ 50 ಗ್ರಾಂ ಗಾಂಜಾ ಸಹಿತ ಸಾಗಾಟಕ್ಕೆ ಬಳಸಿದ ಸ್ಕೂಟರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಆರೋಪಿ ಕೇರಳ ಭಾಗದಿಂದ ಗಾಂಜಾ ಖರೀದಿಸಿ ಮಂಗಳೂರಿನಲ್ಲಿ ಮಾರಾಟ ನಡೆಸಲೆಂದು ಸಾಗಾಟ ನಡೆಸುವಾಗ ಬಂಧಿಸಲಾಗಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಳ್ಳಾಲ ಠಾಣಾಧಿಕಾರಿ ಗೋಪಿಕೃಷ್ಣ ಕೆ.ಆರ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಎಸ್.ಐ ಗುರುವಪ್ಪ ಕಾಂತಿ ಹಾಗೂ ಸಿಬ್ಬಂದಿಗಳಾದ ದಯಾನಂದ, ಶರೀಫ್, ಪ್ರಶಾಂತ್, ಲಿಂಗರಾಜು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
Next Story