ಎಸ್ಐಒನಿಂದ ಚುನಾವಣಾ ವಿದ್ಯಾರ್ಥಿ ಪ್ರಣಾಳಿಕೆ ಬಿಡುಗಡೆ
ಉಡುಪಿ, ಮಾ.18: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸುವ ನಿಟ್ಟಿನಲ್ಲಿ ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಶನ್ ಆಫ್ ಇಂಡಿಯಾ (ಎಸ್ಐಓ) ಕರ್ನಾಟಕವು ಹೊರತಂದಿರುವ 60 ಬೇಡಿಕೆಗಳನ್ನೊಳಗೊಂಡ ಚುನಾವಣಾ ವಿದ್ಯಾರ್ಥಿ ಪ್ರಣಾಳಿಕೆಯನ್ನು ಸೋಮವಾರ ಉಡುಪಿ ಪ್ರೆಸ್ಕ್ಲಬ್ನಲ್ಲಿ ಬಿಡುಗಡೆ ಗೊಳಿಸಲಾಯಿತು.
ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಐಒ ರಾಜ್ಯ ಸಂಪರ್ಕ ಕಾರ್ಯದರ್ಶಿ ಯಾಸೀನ್ ಕೋಡಿಬೆಂಗ್ರೆ, ಶಿಕ್ಷಣ, ಉದ್ಯೋಗ, ಪರಿಸರ, ಸಾಮಾಜಿಕ ನ್ಯಾಯ ಮತ್ತು ಮಾನವ ಹಕ್ಕುಗಳಡಿಯಲ್ಲಿ ಅಗತ್ಯವಿರುವ ಮುಖ್ಯಾಂಶಗಳನ್ನು ಈ ವಿದ್ಯಾರ್ಥಿ ಪ್ರಣಾಳಿಕೆಯಲ್ಲಿ ಚರ್ಚಿಸಲಾಗಿದ್ದು, ರಾಜ ಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಇದನ್ನು ಅಳವಡಿಸುವಂತೆ ಒತ್ತಾುಸ ಲಾಗುವುದು ಎಂದು ತಿಳಿಸಿದರು.
ಹಲವು ಶಿಕ್ಷಣ ಆಯೋಗಗಳ ಶಿಫಾರಸಿನಂತೆ ಶಿಕ್ಷಣದ ಮೇಲಿನ ವೆಚ್ಚದ ಪ್ರಮಾಣವನ್ನು ಜಿಡಿಪಿಯ ಶೇ.8ಕ್ಕೆ ಏರಿಸಬೇಕು. ಆರ್ಟಿಇ ಕಾಯ್ದೆಯನ್ನು ಹುಟ್ಟಿನಿಂದ 18 ವಯಸ್ಸಿನ ವರೆಗೆ ವಿಸ್ತರಿಸಬೇಕು. ಪ್ರಾದೇಶಿಕ ಭಾಷೆಯಲ್ಲಿ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು. ಗ್ರಾಮಕ್ಕೊಂದು ಶಾಲೆ ಪರಿಕಲ್ಪನೆಯಡಿ ಯಲ್ಲಿ ಶಾಲೆಗಳನ್ನು ಸ್ಥಾಪಿಸಬೇಕು. ಎಲ್ಲ ವಿವಿ ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ ನಡೆಸಬೇಕೆಂದು ಎಸ್ಐಓ ಪ್ರಣಾಳಿಕೆಯಲ್ಲಿ ಚರ್ಚಿಸಲಾಗಿದೆ ಎಂದರು.
ಕೇಂದ್ರ ಸರಕಾರದ ಕೌಶಲ್ಯ ಭಾರತ ಯೋಜನೆಯಡಿ ತರಬೇತಿ ಪಡೆದವರಿಗೆ ಉದ್ಯೋಗ ಖಾತ್ರಿ ನೀಡಬೇಕು. ಎಲ್ಲ ಸರಕಾರಿ ಮತ್ತು ಸಾರ್ವಜನಿಕ ಹುದ್ದೆ ಗಳನ್ನು ಭರ್ತಿ ಮಾಡಬೇಕು. ಜಸ್ಟಿಸ್ ರಂಗನಾಥ ಮಿಶ್ರಾ ಸಮಿತಿಯ ವರದಿ ಯಂತೆ ಧಾರ್ಮಿಕ ಅಲ್ಪಸಂಖ್ಯಾತ ವಿಭಾಗಕ್ಕೆ ಸಾರ್ವಜನಿಕ ಸೇವೆ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಶೇ.10ರಷ್ಟು ಮೀಸಲಾತಿಯನ್ನು ನೀಡಬೇಕು. ಬತ್ತಿರುವ ಕೆರೆಗಳಲ್ಲಿ ಮತ್ತೆ ನೀರು ತುಂಬಿಕೊಳ್ಳುವಂತೆ ರಾಜ್ಯವು ಶ್ರಮಿಸಬೇಕು. ನದಿಗಳ ಒಳ ಹರಿವಿನ ಮೌಲ್ಯಮಾಪನವನ್ನು ಜಾರಿಗೊಳಿಸ ಬೇಕು ಎಂದು ಅವರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಎಸ್ಐಓ ಜಿಲ್ಲಾಧ್ಯಕ್ಷ ಅಫ್ವಾನ್ ಹೂಡೆ, ಜಿಲ್ಲಾ ಕಾರ್ಯ ದರ್ಶಿ ಮುಹಮ್ಮದ್ ಶಾರೂಕ್, ಹೂಡೆ ಘಟಕದ ಅಧ್ಯಕ್ಷ ನಾಸೀರ್, ಮಲ್ಪೆ ಘಟಕದ ಕಾರ್ಯದರ್ಶಿ ಅಯಾನ್ ಉಪಸ್ಥಿತರಿದ್ದರು.