ಶಕ್ತಿ ಕಾಲೇಜಿನಲ್ಲಿ ಅನುಭಾವ ಸಂಗಮ ಚಿಂತನಗೋಷ್ಠಿಗಳು
ಮಂಗಳೂರು, ಮಾ.18: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್, ದ.ಕ. ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಹಾಗೂ ಶಕ್ತಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಘದ ಸಂಯುಕ್ತ ಆಶ್ರಯದಲ್ಲಿ ಶಕ್ತಿನಗರದ ಶಕ್ತಿ ಪಿಯು ಕಾಲೇಜಿನಲ್ಲಿ ವಚನಗಳ ಕುರಿತಂತೆ ಚಿಂತನಗೋಷ್ಠಿಗಳು ನಡೆದವು.‘ವರ್ತಮಾನಕ್ಕೂ ವಚನ’ ಚಿಂತನಗೋಷ್ಠಿಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ್ಕುಮಾರ್ ಕಲ್ಕೂರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ವಚನ ಸಾಹಿತ್ಯವೂ ಒಂದು ಪ್ರಮುಖ ಪ್ರಕಾರವಾಗಿದೆ. 12ನೇ ಶತಮಾನದಿಂದಲೂ ಮಾನವನ ಸಂಸ್ಕಾರ, ಸಂಸ್ಕತಿಯನ್ನು ರೂಪಿಸುವುದರಲ್ಲಿ, ಮೌಲ್ಯಗಳನ್ನು ಬೆಳೆಸುವಲ್ಲಿ ವಚನ ಸಾಹಿತ್ಯ ಪ್ರಮುಖ ಪಾತ್ರ ನಿರ್ವಹಿಸುತ್ತಾ ಬಂದಿರು ವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದರು.
ಜಿಲ್ಲಾ ಶರಣ ಸಾಹಿತ್ಯ ಪರಿಷತ್ನ ಅಧ್ಯಕ್ಷ ಜಗನ್ನಾಥಪ್ಪ ಪನಸಾಳೆ ಜನವಾಡಾ ಮಾತನಾಡಿದರು. ಶಕ್ತಿ ಪಿಯು ಕಾಲೇಜಿನ ಪ್ರಾಚಾರ್ಯ ಪ್ರಭಾಕರ ಜಿ.ಎಸ್. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಸಿ.ನಾಕ್ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಸೀಮಾಬಾನು ಸ್ವಾಗತಿಸಿದರು. ಅಕ್ಷತಾ ಎಂ.ಜಿ. ಕಾರ್ಯಕ್ರಮ ನಿರೂಪಿಸಿದರು.
ಚಿಂತನಗೋಷ್ಠಿ ‘ವಚನಗಳು ಸಾರುವ ಸಾರ್ವಕಾಲಿಕ ಮೌಲ್ಯಗಳು’ ವಿಷಯದ ಬಗ್ಗೆ ಸಾವಿತ್ರಿ ರಮೇಶ್ ಭಟ್ ವಿಚಾರ ಮಂಡಿಸಿದರು. ‘ಸಾಮಾಜಿಕ ಕ್ರಾಂತಿಗೆ ಮುನ್ನುಡಿ ಬರೆದ ವಚನಗಳು’ ಗೋಷ್ಠಿಯನ್ನು ಪ್ರಾಧ್ಯಾಪಕ ಹಾಗೂ ಪ್ರಸಿದ್ಧ ಕೀರ್ತನಕಾರ ಡಾ. ಗುರುದಾಸ್ ಎಸ್.ಪಿ. ಅವರು ವಿಚಾರ ಮಂಡಿಸಿದರು.
ಸಮಾರೋಪ ಸಮಾರಂಭದಲ್ಲಿ ಶಕ್ತಿ ವಸತಿ ಶಾಲೆಯ ಪ್ರಾಚಾರ್ಯೆ ವಿದ್ಯಾ ಕಾಮತ್ ಜಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜಿಲ್ಲಾ ಶರಣ ಸಾಹಿತ್ಯ ಪರಿಷತ್ನ ಗೌರವಾಧ್ಯಕ್ಷ ಬೈಕಾಡಿ ಜನಾರ್ದನ ಆಚಾರ್ ಸಮಾರೋಪ ಭಾಷಣ ಮಾಡಿದರು. ವಿಶ್ವವಿದ್ಯಾಲಯ ಕಾಲೇಜಿನ ಹಿಂದಿ ವಿಭಾಗದ ನಿವೃತ್ತ ಮುಖ್ಯಸ್ಥ ಡಾ. ಮುರಳೀಧರ್ ನಾಕ್ ಅಧ್ಯಕ್ಷತೆ ವಹಿಸಿದ್ದರು.
ವಿನೋದ್ ಎಫ್. ಡಿಸೋಜ ಸ್ವಾಗತಿಸಿದರು. ಕೆ.ಜಿ. ಪಾಟೀಲ ವಂದಿಸಿದರು. ಶಶಿಕಲಾ ಎಂ.ಎನ್. ಕಾರ್ಯಕ್ರಮ ನಿರೂಪಿಸಿದರು. ರತ್ನಾವತಿ ಜೆ. ಬೈಕಾಡಿ ನೇತೃತ್ವದ ಉರ್ವದ ಇಂಚರ ತಂಡದವರು ವಚನಗಾಯನ ಪ್ರಸ್ತುತ ಪಡಿಸಿದರು.