ಮಣಿಪಾಲ: ಜಿಲ್ಲಾಧಿಕಾರಿ ಕಚೇರಿ ಭದ್ರತಾ ಸಿದ್ದತೆ ಪರಿಶೀಲನೆ
ಉಡುಪಿ, ಮಾ.20: ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಲೋಕ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಬುಧವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಿಂದ 100 ಮೀ. ವ್ಯಾಪ್ತಿಯೊಳಗಿನ ಪ್ರದೇಶಗಳಲ್ಲಿ ಮಾಡಲಾಗಿರುವ ಭದ್ರತೆ ಹಾಗೂ ಇತರ ಸಿದ್ದತೆಗಳನ್ನು ಪರಿಶೀಲಿಸಿದರು.
ಜಿಲ್ಲಾಧಿಕಾರಿ ಕಚೇರಿಯಿಂದ 100 ಮೀ. ವ್ಯಾಪ್ತಿಯೊಳಗಿನ ಪ್ರದೇಶಗಳಲ್ಲಿ ಯಾವುದೇ ರಾಜಕೀಯ ಪಕ್ಷಗಳು ಅಥವಾ ಅ್ಯರ್ಥಿಗಳ ಪರ ಮೆರವಣಿಗೆ ಅಥವಾ ನಾಮಪತ್ರ ಸಲ್ಲಿಸಲು ನಿರ್ಬಂಧ ಇರುವ ಹಿನ್ನೆಲೆಯಲ್ಲಿ ಜಿಲ್ಲಾಧಿಾರಿ ಗಳು ಈ ಪರಿಶೀಲನೆ ನಡೆಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಯವರೊಂದಿಗೆ ಉಪಸ್ಥಿತರಿದ್ದರು.
Next Story