ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಮುಖ್ಯಸ್ಥನ ವಿರುದ್ಧ ದೂರು
ಮಂಗಳೂರು, ಮಾ.21: ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ರಾಜ್ಯ ಮುಖಂಡ, ಕುಲಾಲರ ಸಂಘಟನೆಯ ಮುಖಂಡ, ಯುವ ವೈದ್ಯ ಡಾ. ಅಣ್ಣಯ್ಯ ಕುಲಾಲ್ ವಿರುದ್ಧ ನಗರದ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದ.ಕ.ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿಯಾಗಿರುವ ಬಂಟ್ವಾಳ ಸಿದ್ದಕಟ್ಟೆಯ ಪ್ರಸಾದ್ ಕುಲಾಲ್ ಎಂಬವರು ಮಾ.20ರಂದು ಪಾಂಡೇಶ್ವರ ಠಾಣೆಗೆ ದೂರು ನೀಡಿ ತನಗೆ ವೈದ್ಯ ಡಾ. ಅಣ್ಣಯ್ಯ ಕುಲಾಲ್ ಫೋನ್ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Next Story