ಹೃದಯಾಘಾತದಿಂದ ರೈಲು ಪ್ರಯಾಣಿಕ ಮೃತ್ಯು
ಮಣಿಪಾಲ, ಮಾ.23: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಾ23ರಂದು ಬೆಳಗಿನ ಜಾವ ಇಂದ್ರಾಳಿ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ.
ಮೃತರನ್ನು ಮಂಗಳೂರು ಏಲತ್ತೂರು ಗ್ರಾಮದ ದಿನೇಶ್ ಶೆಟ್ಟಿ(55) ಎಂದು ಗುರುತಿಸಲಾಗಿದೆ. ಮುಂಬೈಯಲ್ಲಿ ಕೆಲಸ ಮಾಡಿಕೊಂಡಿದ್ದ ಇವರು, ಮಾ.22 ರಂದು ರಾತ್ರಿ 8:30ರ ಸುಮಾರಿಗೆ ಮುಂಬೈಯಿಂದ ಊರಿಗೆ ರೈಲಿನಲ್ಲಿ ಹೊರಟಿದ್ದರು. ರೈಲು ಇಂದು ಬೆಳಗ್ಗೆ ಇಂದ್ರಾಳಿ ರೈಲ್ವೆ ಸ್ಟೇಷನ್ ತಲುಪುವ ಮಾರ್ಗದಲ್ಲಿ ದಿನೇಶ್ ಶೆಟ್ಟಿ ಹೃದಯಘಾತದಿಂದ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story