ಗಂಗೊಳ್ಳಿ: ನದಿಗೆ ಬಿದ್ದು ವ್ಯಕ್ತಿ ಮೃತ್ಯು
ಗಂಗೊಳ್ಳಿ, ಮಾ.23: ನದಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮರವಂತೆ ಗ್ರಾಮದ ಕಳಿಹಿತ್ಲು ಎಂಬಲ್ಲಿ ಮಾ.22ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 4ಗಂಟೆಯ ಮಧ್ಯಾವಧಿಯಲ್ಲಿ ನಡೆದಿದೆ.
ಮೃತರನ್ನು ಕಳಿಹಿತ್ಲು ನಿವಾಸಿ ರಿಚ್ಚರ್ಡ ಗೋನ್ಸಾಲಿಸ್(58) ಎಂದು ಗುರು ತಿಸಲಾಗಿದೆ. ಮನೆಯ ಸಮೀಪದ ಸೌಪರ್ಣಿಕ ನದಿಯಲ್ಲಿ ತೆಂಗಿನ ಕಾಯಿ ಯನ್ನು ಹೆಕ್ಕಲು ದೋಣಿಯಲ್ಲಿ ಹೋದ ಇವರು ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story