ಬಿ.ರತ್ನಾಕರ ಶೆಟ್ಟಿ
ಉಡುಪಿ, ಮಾ.25: ಸಾಲಿಗ್ರಾಮದ ನಿವಾಸಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ, ಬಹ್ಮಾವರ ಅಧಿಕಾರಿ ಮನೆ ಬಿ.ರತ್ನಾಕರ ಶೆಟ್ಟಿ (78) ಸೋಮವಾರ ಮುಂಜಾನೆ ಸ್ವಗೃಹದಲ್ಲಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು.
ಅವರು 36 ವರ್ಷಗಳ ಕಾಲ ಹಂಗಾರಕಟ್ಟೆ ಚೇತನ ಪ್ರೌಢಶಾಲೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು.
ಬಂಟರ ಮಾತೃ ಸಂಘದ ಹಿರಿಯ ಸದಸ್ಯರಾಗಿದ್ದ ಅವರು, ಬಾರ್ಕೂರು ಲಯನ್ಸ್ ಕ್ಲಬ್ ಸೇರಿದಂತೆ ಅನೇಕ ಸಂಘಸಂಸ್ಥೆಗಳಲ್ಲಿ ಸದಸ್ಯರಾಗಿದ್ದರು.
ಅವರು ಉಡುಪಿಯ ಯವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಷನ್ ಕುಮಾರ್ ಶೆಟ್ಟಿ ಸೇರಿದಂತೆ ಇಬ್ಬರು ಪುತ್ರರು ಮತ್ತು ಓರ್ವೆ ಪುತ್ರಿಯನ್ನು ಅಗಲಿದ್ದಾರೆ.
Next Story