ಮಾ. 26: ತೆಂಗು ಕೃಷಿ ಮಾಹಿತಿ ಶಿಬಿರ
ಉಡುಪಿ, ಮಾ.25: ಉಡುಪಿ ಜಿಲ್ಲಾ ಕೃಷಿಕ ಸಂಘದ ಕಲ್ಯಾಣಪುರ ವಲಯ ಸಮಿತಿಯ ವತಿಯಿಂದ ತೆಂಗು ಕೃಷಿ ಮಾಹಿತಿ ಕಾರ್ಯಕ್ರಮ ಮಾ. 26ರ ಸಂಜೆ 4.30ಕ್ಕೆ ಕೆಳಾರ್ಕಳಬೆಟ್ಟು ಶ್ರೀ ದುರ್ಗಾ ಪರಮೇಶ್ವರಿ ಮಾರಿಗುಡಿ ಅಮ್ಮನವರ ಗದ್ದಿಗೆ ವಠಾರದಲ್ಲಿ ನಡೆಯಲಿದೆ.
ಇದರಲ್ಲಿ ಮಾಹಿತಿದಾರರಾಗಿ ಕೃಷಿಕ ಸಂಘದ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ಹಾಗೂ ಪ್ರಧಾನ ಕಾರ್ಯದರ್ಶಿ ಕುದಿ ಶ್ರೀನಿವಾಸ ಭಟ್ ಭಾಗವಹಿಸಲಿ ದ್ದಾರೆ. ವೈಜ್ಞಾನಿಕ ರೀತಿಯಲ್ಲಿ ಕಡಿಮೆ ಖರ್ಚಿನಲ್ಲಿ ಲಾಭದಾಯಕ ವಾಗಿ ತೆಂಗು ಬೆಳೆ ಕೃಷಿ ಮಾಡುವ ಕ್ರಮಗಳು, ಅವುಗಳ ನಾಟಿ, ಕೀಟ-ರೋಗ ಬಾಧೆಗಳ ನಿರ್ವಹಣೆ ಕುರಿತ ಸಮಗ್ರ ಮಾಹಿತಿಯನ್ನು ನೀಡಲಾಗುತ್ತದೆ ಎಂದು ಕೃಷಿಕ ಸಂಘದ ಪ್ರಕಟಣೆ ತಿಳಿಸಿದೆ.
Next Story