ದರ್ಶನ್ ಮನೆ ಮೇಲೆ ಕಲ್ಲು ತೂರಾಟ: ದುಷ್ಕರ್ಮಿಗಳ ವಿರುದ್ಧ ಎಫ್ಐಆರ್ ದಾಖಲು
ಬೆಂಗಳೂರು, ಮಾ.25: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಪರ ಪ್ರಚಾರಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮನೆ ಮೇಲೆ ಕಲ್ಲುತೂರಾಟ ನಡೆಸಿದ್ದ ದುಷ್ಕರ್ಮಿಗಳ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮಾ.23 ರ ಮಧ್ಯರಾತ್ರಿ 1 ಗಂಟೆಗೆ ನಟ ದರ್ಶನ್ರ ಮನೆ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಡಿದ್ದರು. ದರ್ಶನ್ ಮ್ಯಾನೇಜರ್ ಶ್ರೀನಿವಾಸ್ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಚುರುಕುಗೊಳಿಸಿದ್ದಾರೆ.
ದೂರಿನಲ್ಲಿ ಏನಿದೆ?: ಹೊಸಕೆರೆಹಳ್ಳಿ ಕ್ರಾಸ್ ಗಿರಿನಗರದಲ್ಲಿರುವ ದರ್ಶನ್ ಮನೆಯಲ್ಲಿ ಸುಮಾರು 15 ವರ್ಷಗಳಿಂದ ಕೆಲಸದಲ್ಲಿದ್ದೇನೆ. ದರ್ಶನ್ ಅವರಿಗೆ ಸೇರಿದ ಬೆಂಗಳೂರಿನಲ್ಲಿರುವ ರಾಜರಾಜೇಶ್ವರಿನಗರ ಮನೆ ನಂ.217 ತೂಗುದೀಪ ನಿಲಯಕ್ಕೆ 22ರ ಮಧ್ಯರಾತ್ರಿ 12.54 ಸಂದರ್ಭದಲ್ಲಿ ಅಪರಿಚಿತರು ಕಲ್ಲು ಎಸೆದು, ಹುಟ್ಟುಹಬ್ಬಕ್ಕೆ ಹಾಕಿದ ಫ್ಲೆಕ್ಸ್ ಹರಿದು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
Next Story