ಚುನಾವಣೆ: ಕೊನೆಯ ದಿನ 11 ನಾಮಪತ್ರ
ಉಡುಪಿ, ಮಾ.26:ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾದ ಇಂದು ಒಟ್ಟು 7 ಅಭ್ಯರ್ಥಿ ಗಳಿಂದ 11ನಾಮಪತ್ರಗಳು ಸಲ್ಲಿಕೆಯಾಗಿವೆ.
ಪಿ.ಪರಮೇಶ್ವರ್ (ಬಹುಜನ ಸಮಾಜ ಪಾರ್ಟಿ) 2 ನಾಮಪತ್ರ, ಶೋಭಾ ಕರಂದ್ಲಾಜೆ (ಬಿಜೆಪಿ) 2 ನಾಮಪತ್ರ, ಪ್ರಮೋದ್ ಮಧ್ವರಾಜ್ (ಜಾತ್ಯಾತೀತ ಜನತಾದಳ) 2 ನಾಮಪತ್ರ, ಅಮೃತ್ ಶೆಣೈ ಪಿ (ಪಕ್ಷೇತರ) 2 ನಾಮಪತ್ರ, ಮತ್ತು ಸುಧೀರ್ ಕಾಂಚನ್ (ಪಕ್ಷೇತರ), ಕೆ.ಸಿ. ಪ್ರಕಾಶ್ (ಪಕ್ಷೇತರ), ಅಬ್ದುಲ್ ರೆಹಮಾನ್ (ಪಕ್ಷೇತರ) ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಬಿಜೆಪಿಯ 4, ಜೆಡಿಸ್ನ 4, ಬಿಎಸ್ಪಿ2, ರಿಪಬ್ಲಿಕನ್ ಪಾರ್ಟಿ ಆಪ್ ಇಂಡಿಯಾದ 2, ಪ್ರೌಟಿಸ್ಟ್ ಸರ್ವ ಸಮಾಜ್ನ 2, ಶಿವಸೇನಾದ 2 , ಉತ್ತಮ ಪ್ರಜಾಕೀಯ ಪಾರ್ಟಿಯ 1, ಕಮ್ಯೂನಿಸ್ಟ್ ಪಾರ್ಟಿ ಆಪ್ ಇಂಡಿಯಾ ಮಾರ್ಕಿಸ್ಟ್ ಲೆನಿನಿಸ್ಟ್ ರೆಡ್ ಸ್ಟಾರ್ನ 1 ಹಾಗೂ ಪಕ್ಷೇತರರ 8 ನಾಮಪತ್ರ ಸೇರಿದಂತೆ ಒಟ್ಟು 26 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಮತಗಟ್ಟೆ ಅಧಿಕಾರಿ, ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ತರಬೇತಿ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಲು ನೇಮಕಾತಿ ಆದೇಶ ಪಡೆದ ಎಲ್ಲಾ ಮತಗಟ್ಟೆ ಅಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧಿಕಾರಿಗಳಿಗೆ ಮಾ.31ರಂದು 118-ಬೈಂದೂರು ವಿಧಾನಸಬಾ ಕ್ಷೇತ್ರದ ಶೀರೂರು ಗ್ರೀನ್ ವ್ಯಾಲಿ ಇಂಟರ್ ನ್ಯಾಷನಲ್ ಸ್ಕೂಲ್, 119-ಕುಂದಾಪುರ ವಿಧಾನಸಭಾ ಕ್ಷೇತ್ರದ ಕುಂದಾಪುರ ಜೂನಿಯರ್ ಕಾಲೇಜು, 120- ಉಡುಪಿ ವಿಧಾನಸಬಾ ಕ್ಷೇತ್ರದ ಬ್ರಹ್ಮಗಿರಿ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆ, 121-ಕಾಪು ವಿಧಾನಸಬಾ ಕ್ಷೇತ್ರದ ಕಾಪು ಉಳಿಯಾರಗೋಳಿ ದಂಡತೀರ್ಥ ಪದವಿ ಪೂರ್ವ ಕಾಲೇಜು, 122- ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಕಳ ಗಾಂಧಿ ಮೈದಾನ ಕ್ರೈಸ್ತ ಕಿಂಗ್ ಪದವಿ ಪೂರ್ವ ಕಾಲೇಜಿನಲ್ಲಿ ತರಬೇತಿ ನೀಡಲಾಗುವುದು.
ನೇಮಕಾತಿ ಆದೇಶ ಪಡೆದಿರುವ ಎಲ್ಲಾ ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳು ಅವರವರ ನೇಮಕಾತಿ ಆದೇಶದಲ್ಲಿ ನಮೂದಿಸಿದ ಸ್ಥಳಗಳಲ್ಲಿ ಕಡ್ಡಾಯವಾಗಿ ತರಬೇತಿಗೆ ಹಾಜರಾಗಬೇಕು. ವೌಲ್ಯಮಾಪನಕ್ಕೆ ಹಾಜರಾದ ಉಪನ್ಯಾಸಕರು ಮಾ.31ರ ತರಬೇತಿಯಿಂದ ವಿನಾಯಿತಿ ಪಡೆದು ಎ.6ರಂದು ಉಡುಪಿ ಬ್ರಹ್ಮಗಿರಿಯ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯಲ್ಲಿ ಬೆಳಗ್ಗೆ 10ಕ್ಕೆ ಕಡ್ಡಾಯವಾಗಿ ತರಬೇತಿಗೆ ಹಾಜರಾಗಲು ಸೂಚಿಸಲಾಗಿದೆ.
ನೇಮಕಾತಿ ಆದೇಶ ಪಡೆದಿರುವ ಎಲ್ಲಾ ಮತಗಟ್ಟೆ ಅಧಿಕಾರಿಗಳು ಹಾಗೂ ಸಹಾಯಕ ಮತಗಟ್ಟೆ ಅಧಿಕಾರಿಗಳು ಅವರವರ ನೇಮಕಾತಿ ಆದೇಶದಲ್ಲಿ ನಮೂದಿಸಿದ ಸ್ಥಳಗಳಲ್ಲಿ ಕಡ್ಡಾಯವಾಗಿ ತರಬೇತಿಗೆ ಹಾಜರಾಗಬೇಕು. ವೌಲ್ಯಮಾಪನಕ್ಕೆ ಹಾಜರಾದ ಉಪನ್ಯಾಸಕರು ಮಾ.31ರ ತರಬೇತಿಯಿಂದ ವಿನಾಯಿತಿ ಪಡೆದು ಎ.6ರಂದು ಉಡುಪಿ ಬ್ರಹ್ಮಗಿರಿಯ ಸೈಂಟ್ ಸಿಸಿಲೀಸ್ ಶಿಕ್ಷಣ ಸಂಸ್ಥೆಯಲ್ಲಿ ಬೆಳಗ್ಗೆ 10ಕ್ಕೆ ಕಡ್ಡಾಯವಾಗಿ ತರಬೇತಿಗೆ ಹಾಜರಾಗಲು ಸೂಚಿಸಲಾಗಿದೆ.
ಗೈರುಹಾಜರಾದ ಅಧಿಕಾರಿಗಳ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆಯನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.