ಎಸಿಬಿಯಿಂದ ದೂರು ಸ್ವೀಕಾರ
ಮಂಗಳೂರು, ಮಾ. 26: ದ.ಕ. ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಮಾ.28 ಮತ್ತು 29ರಂದು ಪುತ್ತೂರು ಹಾಗೂ ಬೆಳ್ತಂಗಡಿ ತಾಲೂಕಿಗೆ ಭೇಟಿ ನೀಡಲಿದ್ದು, ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ದೂರುಗಳನ್ನು ಸ್ವೀಕರಿಸಲಿದ್ದಾರೆ.
ಮಾ.28ರಂದು ಪೂರ್ವಾಹ್ನ 11ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಪುತ್ತೂರು ತಾಲೂಕಿನ ಪುತ್ತೂರು ಸರಕಾರಿ ಪ್ರವಾಸಿ ಮಂದಿರದಲ್ಲಿ ದೂರುಗಳನ್ನು ಸ್ವೀಕರಿಸಲಿದ್ದಾರೆ.
ಮಾ. 29ರಂದು ಪೂರ್ವಾಹ್ನ 11 ಗಂಟೆಯಿಂದ ಮದ್ಯಾಹ್ನ 1 ಗಂಟೆಯವರೆಗೆ ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ ಸರಕಾರಿ ಪ್ರವಾಸಿ ಮಂದಿರ ಕೇಂದ್ರಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ ಎಂದು ಎಸಿಬಿ ಪೊಲೀಸ್ ಉಪಾಧೀಕ್ಷಕರ ಪ್ರಕಟನೆ ತಿಳಿಸಿದೆ.
Next Story