ಉಪ್ಪಿನಂಗಡಿ: ಕಾರು ಢಿಕ್ಕಿ; ಬೈಕ್ ಸವಾರನಿಗೆ ಗಾಯ
ಉಪ್ಪಿನಂಗಡಿ: ಓಮ್ನಿ ಕಾರು ಹಾಗೂ ಬೈಕ್ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಬೈಕ್ ಸವಾರ ಗಾಯಗೊಂಡ ಘಟನೆ ಹಳೆಗೇಟು- ಮರ್ಧಾಳ ರಸ್ತೆಯ ಪೆರಿಯಡ್ಕ ಎಂಬಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.
ಬೈಕ್ ಸವಾರ ಕೊಯಿಲ ನಿವಾಸಿ ಜೀವನ್ ಗಾಯಗೊಂಡವರು ಎಂದು ತಿಳಿದುಬಂದಿದೆ.
ಕೊಯಿಲ ಕಡೆಯಿಂದ ಉಪ್ಪಿನಂಗಡಿ ಕಡೆ ತೆರಳುತ್ತಿದ್ದ ಬೈಕ್ ಗೆ ಬೊಳ್ಳಾವು ಅಡ್ಡ ರಸ್ತೆಗೆ ತಿರುಗಿಸುವಲ್ಲಿ ಓಮ್ನಿ ಕಾರು ಢಿಕ್ಕಿ ಹೊಡೆದಿದೆ. ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟಿದ್ದು, ಓಮ್ನಿ ಮಗುಚಿ ಬಿದ್ದಿದ್ದು, ಚಾಲಕ ಸತ್ಯನಾರಾಯಣ ಭಟ್ ಗಾಯಗೊಂಡಿದ್ದಾರೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.