ತೆಂಕನಿಡಿಯೂರು: ಎನ್ಎಸ್ಡಿಸಿ ತರಬೇತಿ
ಉಡುಪಿ, ಮಾ.27: ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಉದ್ಯೋಗ ಮಾಹಿತಿ ಘಟಕ, ಐಕ್ಯೂಎಸಿ ಹಾಗೂ ಎನ್ಎಸ್ಡಿಸಿ ಸಂಸ್ಥೆ, ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಸ್ಕಿಲ್ ಸಾಥಿ ಅಡಿಯಲ್ಲಿ ಉದ್ಯೋಗ ಮತ್ತು ಸ್ವಉದ್ಯೋಗ ತರಬೇತಿ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಉಡುಪಿ ವಿಭಾಗದ ಎನ್ಎಸ್ಡಿಸಿ ತರಬೇತುದಾರ ಸುಬ್ರಹ್ಮಣ್ಯ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ 15 ದಿನಗಳಿಂದ 3 ತಿಂಗಳ ವರೆಗೆ ಕೆಲವು ಸರ್ಟಿಫಿಕೇಟ್ ಕೋರ್ಸ್ಗಳನ್ನು ಉಚಿತವಾಗಿ ಕಲಿಯುವುದಕ್ಕೆ ಅವಕಾಶ ಮಾಡಿಕೊಟ್ಟು ಬಳಿಕ ಉದ್ಯೋಗ ಪಡೆುಲು ನೆರವು ನೀಡುತ್ತವೆ ಎಂದರು.
ಪ್ರಾಂಶುಪಾಲ ಪ್ರೊ. ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಉದ್ಯೋಗ ಮಾಹಿತಿ ಘಟಕದ ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ. ಎಚ್.ಕೆ. ವೆಂಕಟೇಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಉದ್ಯೋಗ ಮಾಹಿತಿ ಘಟಕದ ಪದವಿ ವಿಭಾಗದ ಸಂಚಾಲಕ ಪ್ರೊ. ಉಮೇಶ ಪೈ ವಂದಿಸಿ ದರು. ಸುಮಾರು 150 ವಿದ್ಯಾರ್ಥಿಳು ಇದರ ಪ್ರಯೋಜನ ಪಡೆದರು.