ಬಸ್ ಡಿಕ್ಕಿ: ಪಾದಚಾರಿ ಮೃತ್ಯು
ಮಂಗಳೂರು: ನೀರುಮಾರ್ಗ ಬಳಿ ಬಸ್ ಢಿಕ್ಕಿ ಹೊಡೆದು ಗಾಯಗೊಂಡಿದ್ದ ಪೆದಮಲೆ ನಿವಾಸಿ ಮಾಧವ ಮೊಯಿಲಿ (50) ಚಿಕಿತ್ಸೆ ಫಲಕಾರಿಯಾಗದೆ ಗುರವಾರ ಮೃತಪಟ್ಟಿದ್ದಾರೆ.
ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ.
ನೀರುಮಾರ್ಗ ಪಂಚಾಯತ್ ಕಚೇರಿಯಲ್ಲಿ ಆಧಾರ್ ಕಾರ್ಡ್ ತಿದ್ದುಪಡಿಗೆ ದಾಖಲೆ ಸಲ್ಲಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭ ನಡೆದುಕೊಂಡು ಹೋಗುತ್ತಿದ್ದ ಅವರಿಗೆ ಖಾಸಗಿ ಸಿಟಿ ಬಸ್ ಬುಧವಾರ ಸಂಜೆ ಢಿಕ್ಕಿ ಹೊಡೆದಿತ್ತು. ತಕ್ಷಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಂಚಾರಿ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
Next Story