ಬೈಕ್-ಜೆಸಿಬಿ ಅಪಘಾತ: ಯುವಕ ಮೃತ್ಯು
ಬೆಂಗಳೂರು, ಮಾ.30: ಶರವೇಗವಾಗಿ ಸಾಗುತ್ತಿದ್ದ ಬೈಕ್ ಮತ್ತು ಜೆಸಿಬಿ ನಡುವೆ ಪರಸ್ಪರ ಢಿಕ್ಕಿ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಇಲ್ಲಿನ ಕೆಎಸ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಕ್ಷಿತ್ ಗೌಡ ಎಂಬಾತ ಮೃತ ಬೈಕ್ ಸವಾರ ಎಂದು ತಿಳಿದುಬಂದಿದೆ.
ಶನಿವಾರ ಬೈಕ್ನಲ್ಲಿ ಸಾಗುತ್ತಿದ್ದ ರಕ್ಷಿತ್ ಗೌಡ, ನೈಸ್ ರಸ್ತೆಯ ಸೋಂಪುರ ಟೋಲ್ ಕಡೆಯಿಂದ ಕನಕಪುರ ರಸ್ತೆ ಕಡೆಗೆ ಬರುತ್ತಿದ್ದ. ಈ ವೇಳೆ ಎದುರಿಗೆ ಬಂದ ಜೆಸಿಬಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ತಲೆಗೆ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹೇಳಲಾಗುತ್ತಿದೆ.
ಈ ಸಂಬಂಧ ಕೆಎಸ್ಲೇಔಟ್ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story