ಪ್ರತ್ಯೇಕ ಪ್ರಕರಣ: ವಿಷ ಸೇವಿಸಿ ಆತ್ಮಹತ್ಯೆ
ಶಿರ್ವ, ಎ.1: ವೈಯಕ್ತಿಕ ಕಾರಣದಿಂದ ಮನನೊಂದು ಮಾ.29ರಂದು ಮಧ್ಯಾಹ್ನ ವೇಳೆ ಮನೆ ಸಮೀಪ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕುರ್ಕಾಲು ಗ್ರಾಮದ ಬಿಳಿಯಾರು ನಿವಾಸಿ ಶೋಭಾ ಮೂಲ್ಯ ಎಂಬವರ ಮಗ ದಿನೇಶ ಕುಲಾಲ್ (29) ಎಂಬವರು ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಾ.31ರಂದು ಸಂಜೆ 7ಗಂಟೆ ಸುಮಾರಿಗೆ ಮೃತಪಟ್ಟರು.
ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೈಂದೂರು: ಜೀವನದಲ್ಲಿ ಜಿಗುಪ್ಸೆಗೊಂಡು ಮಾ.25ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಿರಿಂಜೇಶ್ವರ ಗ್ರಾಮದ ಆಕಳಬೈಲು ನಿವಾಸಿ ರಮೇಶ (50) ಎಂಬವರು ಎ.1ರಂದು ಚಿಕಿತ್ಸೆ ಫಲಕಾರಿಯಾಗದೆ ಉಡುಪಿ ಅಜ್ಜರ ಕಾಡು ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Next Story