ಮೃತರ ವಾರಸುದಾರರಿಗೆ ಸೂಚನೆ
ಉಡುಪಿ, ಎ.3: ಅಂಬಲಪಾಡಿ ಗ್ರಾಮದ ಅಂಬಲಪಾಡಿ ಜಂಕ್ಷನ್ ಸಮೀಪದ ಮಾಧವ ಮಂಗಳ ಸಮುದಾಯ ಭವನದ ಎದುರು ಮಾ.31 ರಂದು ರಾಷ್ಟ್ರೀಯ ಹೆದ್ದಾರಿ 66ನ್ನು ದಾಟಲು ನಿಂತಿದ್ದ ನಾರಾಯಣ (60) ಎಂಬವರಿಗೆ ಅಂಬಲಪಾಡಿಯಿಂದ ಕರಾವಳಿ ಕಡೆ ಬರುತ್ತಿದ್ದ ಕಾರು, ಚಾಲಕನ ನಿರ್ಲಕ್ಷ್ಯತನದಿಂದ ಢಿಕ್ಕಿ ಹೊಡೆದ ಪರಿಣಾಮ, ಕಾಲು ಮತ್ತು ತಲೆಗೆ ಗಂಭೀರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.
ನಾರಾಯಣ ಅವರು ಮೂಲತಃ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ಸುಳ್ಯದವರೆಂದು ತಿಳಿದು ಬಂದಿದ್ದು, ಅವರ ಮೃತದೇಹವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿದೆ.
ಮೃತ ನಾರಾಯಣರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಉಡುಪಿ ಸಂಚಾರ ಠಾಣೆ ದೂ.ಸಂಖ್ಯೆ: 0820-2521332, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರು ದೂ.ಸಂ:0820-2520329, ಜಿಲ್ಲಾ ನಿಯಂತ್ರಣಕೊಠಡಿ ಉಡುಪಿ ದೂ.ಸಂ: 0820-2526444ನ್ನು ಸಂಪರ್ಕಿಸುವಂತೆ ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಪ್ರಕಟಣೆ ತಿಳಿಸಿದೆ.