ಕುಂದಾಪುರ: ವಿಷ ಪದಾರ್ಥ ಸೇವಿಸಿ ಮಹಿಳೆ ಆತ್ಮಹತ್ಯೆ
ಕುಂದಾಪುರ, ಎ.3: ತರಕಾರಿ ಬೆಳೆಗೆ ಬಳಸಲು ಮನೆಯಲ್ಲಿ ತಂದಿರಿಸಿದ ವಿಷ ಪದಾರ್ಥವನ್ನು ಸೇವಿಸಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ತಾಲೂಕಿನ ಕುಂಭಾಶಿ ಗ್ರಾಮದ ಕೊರವಡಿ ಕ್ರಾಸ್ ಎಂಬಲ್ಲಿಂದ ವರದಿಯಾಗಿದೆ.
ಇಲ್ಲಿನ ನಿವಾಸಿ ಶಂಕರ ಪೂಜಾರಿ ಎಂಬವರ ಪತ್ನಿ ಶಾರದಾ (55) ಅವರು ಮಂಗಳವಾರ ರಾತ್ರಿ ವಿಷಯ ಪದಾರ್ಥ ಸೇವಿಸಿದ್ದು, ಕೂಡಲೇ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಸೇರಿಸಿದರೂ, ಅಲ್ಲಿ ಪರೀಕ್ಷಿಸಿದ ವೈದ್ಯರು ಶಾರದಾ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Next Story