ನೀತಿ ಸಂಹಿತೆ ಉಲ್ಲಂಘನೆ: ಪ್ರಕರಣ ದಾಖಲು
ಉಡುಪಿ, ಎ.4: ಪ್ರಧಾನ ಮಂತ್ರಿ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ಉದ್ಯೋಗ ಆಧಾರಿತ ತರಬೇತಿ ನೋಂದಣಿ ಆರಂಭದ ಬಗ್ಗೆ ಪತ್ರಿಕಾ ಪ್ರಕಟಣೆ ಕೊಟ್ಟಿರುವ ರೋಮನ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ನ ರಾಘವೇಂದ್ರ ರಾವ್ ವಿರುದ್ಧ ಮಾದರಿ ನೀತಿ ಸಂಹಿತೆ ಉಲ್ಲಂಘಟನೆಯಡಿ ಮೇಲೆ ಪ್ರಕರಣ ದಾಖಲಾಗಿದೆ.
ಮಾ.15 ಹಾಗೂ 16ರಂದು ದಿನಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿದ್ದು, ಇದು ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಈ ಬಗ್ಗೆ ಪ್ಲೈಯಿಂಗ್ ಸ್ಕಾಡ್ ಟೀಮ್ 2ರ ನಾಗರಾಜ್ ಕೆ.ವಿ. ನೀಡಿದ ದೂರಿನಂತೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story