ಯೋಗದಿಂದ ಆರೋಗ್ಯ ವೃದ್ದಿ: ಡಾ.ರಾಘವೇಂದ್ರ ಪೈ
ಬೆಂಗಳೂರು, ಎ. 4: ಯೋಗದಿಂದ ಆರೋಗ್ಯ ವೃದ್ಧಿಸುವುದಲ್ಲದೆ, ಆಯುಸ್ಸು ಹೆಚ್ಚಿಸಿಕೊಳ್ಳಲು ಅನುಕೂಲ. ಜೊತೆಗೆ ಯೋಗ ವ್ಯಕ್ತಿಯ ಸರ್ವಾಂಗೀಣ ಉನ್ನತಿಗೆ ಸಹಕಾರಿ ಎಂದು ಯೋಗಗುರು ಡಾ.ರಾಘವೇಂದ್ರ ಪೈ ಇಂದಿಲ್ಲಿ ತಿಳಿಸಿದ್ದಾರೆ.
ಗುರುವಾರ ಪೀಣ್ಯ ದಾಸರಹಳ್ಳಿಯಲ್ಲಿ ಏರ್ಪಡಿಸಿದ್ದ ‘ಯೋಗ ನಡಿಗೆ ಆರೋಗ್ಯದ ಕಡೆಗೆ’ ಕಾಲ್ನಡಿಗೆ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆರೋಗ್ಯಕ್ಕಾಗಿ ಸಹಜ ನಡಿಗೆಯನ್ನು ಎಲ್ಲರೂ ರೂಢಿಸಿಕೊಳ್ಳಬೇಕು. ಇದರಿಂದ ಆರೋಗ್ಯ ವೃದ್ಧಿಸಲಿದೆ ಎಂದು ಹೇಳಿದರು.
ಬಾಗಲಗುಂಟೆ ಹಾವನೂರು ಬಡಾವಣೆಯ ವಾಸ್ಕ್ ಯೋಗ ಕೇಂದ್ರದಿಂದ ಆಯೋಜಿಸಿದ್ದ ಯೋಗ ನಡಿಗೆಯಲ್ಲಿ ಮಾಜಿ ಶಾಸಕ ಮುನಿರಾಜು, ಯೋಗಗುರು ಉಮಾಮಹೇಶ್ವರ್ ಸೇರಿದಂತೆ ಮಕ್ಕಳು, ಮಹಿಳೆಯರು ಹಾಗೂ ಹಿರಿಯ ನಾಗರಿಕರು ಜಾಥಾದಲ್ಲಿ ಪಾಲ್ಗೊಂಡಿದ್ದರು.
Next Story