ಚುನಾವಣಾ ತರಬೇತಿಗೆ ಗೈರು ಕಠಿಣ ಕ್ರಮ: ದ.ಕ. ಜಿಲ್ಲಾಧಿಕಾರಿ ಎಚ್ಚರಿಕೆ
ಮಂಗಳೂರು, ಎ.4: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ತರಬೇತಿಗೆ ಗೈರು ಹಾಜರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಎಚ್ಚರಿಕೆ ನೀಡಿದ್ದಾರೆ.
ಮಾ.31ರಂದು ಆಯೋಜಿಸಿದ ಚುನಾವಣಾ ತರಬೇತಿಗೆ ನಿಯೋಜನೆಗೊಂಡ 4,466 ಪಿಆರ್ಒ ಹಾಗೂ ಎಪಿಆರ್ಒಗಳಲ್ಲಿ 51 ಅಧಿಕಾರಿಗಳು ಗೈರು ಹಾಜರಾಗಿದ್ದರು. ಸಂಬಂಧಪಟ್ಟವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು.
ಸಂಬಂಧಪಟ್ಟವರು ನೀಡಿದ ಸಮಜಾಯಿಷಿ ಸಕಾರಣವಾಗಿರದೆ ಇದ್ದರೆ ಪ್ರಜಾಪ್ರಾತಿನಿಧ್ಯ ಕಾಯ್ದೆ 1951ರಡಿ ಅಂತಹವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ನೀಡಿದ್ದಾರೆ.
ಎರಡನೇ ಚುನಾವಣಾ ತರಬೇತಿಯು ಎ.9ರಂದು ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story