ಉಡ್ಡಂಗಲ ನೀರಿಗೆ ಬಿದ್ದು ಮಕ್ಕಳು ಸಾವು: ಗುತ್ತಿಗೆದಾರ, ಇಂಜಿಯರ್ ವಿರುದ್ಧ ದೂರು
ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಉಡ್ಡಂಗಲ ಎಂಬಲ್ಲಿ ಮೂವರು ಮಕ್ಕಳು ಪಂಚಾಯತ್ ನಿರ್ಮಿತ ನೀರಿನ ಟ್ಯಾಂಕ್ಗೆ ಬಿದ್ದು ಮೃತಪಟ್ಟ ಘಟನೆಗೆ ಸಂಬಂಧಿಸಿ ಟ್ಯಾಂಕ್ ನಿರ್ಮಿಸಿದ ಗುತ್ತಿಗೆದಾರ ಹಾಗೂ ಇಂಜಿನಿಯರ್ ವಿರುದ್ಧ ಸಂಪ್ಯ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಗುತ್ತಿಗೆದಾರ ಹಾಗೂ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಇಂಜಿನಿಯರ್ ಟ್ಯಾಂಕ್ನ ಮುಚ್ಚಳಕ್ಕೆ ಬೀಗ ಹಾಕದಿರುವುದು ಹಾಗೂ ಸುತ್ತ ಬೇಲಿ ನಿರ್ಮಿಸದೆ ನಿರ್ಲಕ್ಷ್ಯ ವಹಿಸದೇ ಇರುವ ಕಾರಣಕ್ಕೆ ಪುತ್ತೂರು ಗ್ರಾಮಾಂತ ಪೊಲೀಸ್ ಠಾಣೆಯಲ್ಲಿ ಇವರಿಬ್ಬರ ವಿರುದ್ದ ಕಲಂ 304(ಎ)ಐಪಿಸಿ ಪ್ರಕರಣ ದಾಖಲಾಗಿದೆ.
Next Story