ಅಕ್ರಮ ಮರಳು ಸಾಗಿಸುತ್ತಿದ್ದ ಲಾರಿ ವಶ: 31 ಲಕ್ಷ ರೂ. ಮೌಲ್ಯದ ಸೊತ್ತು ಸ್ವಾಧೀನ
ಮಂಗಳೂರು, ಎ.4: ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಲಾರಿಗಳನ್ನು ಮರೋಳಿ ಕ್ರಾಸ್ನಲ್ಲಿ ಕಂಕನಾಡಿ ನಗರ ಪೊಲೀಸರು ಗುರುವಾರ ಸಂಜೆ ವಶಕ್ಕೆ ಪಡೆದಿದ್ದಾರೆ.
31 ಲಕ್ಷ ರೂ. ವೌಲ್ಯದ ಮರಳು ಮತ್ತು ಲಾರಿಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಮರೋಳಿ ಕ್ರಾಸ್ನಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಅಡ್ಯಾರ್ ನಿಂದ ಪಡೀಲ್ ಮಾರ್ಗವಾಗಿ ಮರಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ವಶಕ್ಕೆ ಪಡೆದ ಮರಳು ಮತ್ತು ಲಾರಿಗಳನ್ನು ಮುಂದಿನ ಸೂಕ್ತ ಕಾನೂನು ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರಿಗೆ ಹಸ್ತಾಂತರಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಡಿಸಿಪಿಗಳಾದ ಹನುಮಂತರಾಯ, ಉಮಾ ಪ್ರಶಾಂತ್ ಹಾಗೂ ಮಂಗಳೂರು ದಕ್ಷಿಣ ಉಪ ವಿಭಾಗದ ಎಸಿಪಿ ರಾಮರಾವ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣಾ ನಿರೀಕ್ಷಕ ಜಗದೀಶ್ ನೇತೃತ್ವದದಲ್ಲಿ ಪ್ರೊಬೇಷನರಿ ಪಿಎಸ್ಸೈ ಹಾಗೂ ಠಾಣಾ ಸಿಬ್ಬಂದಿ ಭಾಗವಹಿಸದ್ದರು.
Next Story