ಹಿರಿಯಡಕ: ಸಮಾಜ-ವಿಜ್ಞಾನಗಳಲ್ಲಿ ವಿಪುಲ ಅವಕಾಶಗಳು
ಉಡುಪಿ, ಎ.5: ಹಿರಿಯಡಕದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯುಎಸಿ ಮತ್ತು ಸಮಾಜಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಬಿಎ ವಿದ್ಯಾರ್ಥಿಗಳಿಗೆ ಸಮಾಜ-ವಿಜ್ಞಾನಗಳಲ್ಲಿ ವಿಪುಲ ಅವಕಾಶಗಳು ಎಂಬ ಉಪನ್ಯಾಸ ಕಾರ್ಯಕ್ರಮ ಕಾಲೇಜಿ ಸಭಾಂಗಣದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ವಿಬಾಗದ ಮುಖ್ಯಸ್ಥ ಹಾಗೂ ಸಂಯೋಜಕ ಡಾ. ದುಗ್ಗಪ್ಪ ಕಜೆಕಾರ್ ಮಾತನಾಡಿ, ಕಲಾ ವಿದ್ಯಾರ್ಥಿಗಳಲ್ಲಿ ತಮ್ಮ ವಿಷಯಗಳ ಕುರಿತಂತೆ ಒಲವು ಇದ್ದು, ಆ ನಿಟ್ಟಿನಲ್ಲಿ ಅಧ್ಯಯನ ಮಾಡಿದರೆ ಮುಂದೆ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸಿಗೆ ಕಾರಣವಾಗುವುದು ಹಾಗೂ ಸರಕಾರಿ ಉದ್ಯೋಗಗಳನ್ನು ಪಡೆಯಲು ಅನುಕೂಲವಾಗುವುದು ಎಂದು ಸಲಹೆ ನೀಡಿದರು.
ಕಲಾ ವಿಬಾಗದ ವಿದ್ಯಾರ್ಥಿಗಳಿಗೆ ನಡೆಸಿದ ವಿವಿಧ ಚಟುವಟಿಕೆಗಳಿಗೆ ಹಾಗೂ ಸ್ಪರ್ಧೆಗಳ ವಿಜೇತರಿಗೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ನಿಕೇತನ ಬಹುಮಾನ ವಿತರಿಸಿದರು.
ಸಂಧ್ಯಾ ಸ್ವಾಗತಿಸಿ, ಪ್ರಿಯಾಂಕ ಕಾರ್ಯಕ್ರಮ ನಿರೂಪಿಸಿದರು. ದಿವ್ಯಾ ವಂದಿಸಿದರು.