ಅತ್ಯಾಚಾರ, ಕೊಲೆ ಆರೋಪಿ ಬಂಧನ: ಸಹಕರಿಸಿದ ಸಾರ್ವಜನಿಕರಿಗೆ ಪೊಲೀಸರಿಂದ ಅಭಿನಂದನೆ
ಹಿರಿಯಡ್ಕ, ಎ.5: ಜೈಲಿಗೆ ಕರೆದುಕೊಂಡು ಹೋಗುವ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಅತ್ಯಾಚಾರ ಕೊಲೆ ಆರೋಪಿ ಹನುಮಂತ ನನ್ನು ಸೆರೆಹಿಡಿಯುವಲ್ಲಿ ಸಹಕರಿಸಿದ ಪೆರ್ಣಂಕಿಲ ಪರಿಸರದ ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ವತಿಯಿಂದ ಇಂದು ಅಭಿನಂದನೆ ಸಲ್ಲಿಸಲಾಯಿತು.
ಹಿರಿಯಡ್ಕ ಮಾಧವ ಮಂಗಲ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಜಿಲ್ಲಾ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ ಪೆರ್ಣಂಕಿಲದ ಲತಾ ಹಾಗೂ ಪುಷ್ಪಲತಾ ಅವರಿಗೆ ಅಭಿನಂದನಾ ಪತ್ರ ನೀಡಿ ಸನ್ಮಾನಿಸಿದರು. ಬಳಿಕ ಮಾತನಾಡಿದ ಎಸ್ಪಿ, ಮುಂದೆಯೂ ಸಾರ್ವಜನಿಕರು ಪೊಲೀಸ್ ಇಲಾಖೆಗೆ ಇದೇ ರೀತಿಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಉಡುಪಿ ಡಿವೈಎಸ್ಪಿ ಜೈಶಂಕರ್ ಸ್ವಾಗತಿಸಿದರು. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಾರ್ವಜನಿಕರ ಪರವಾಗಿ ಕೃಷ್ಣ ಪ್ರಸಾದ್ ಶೆಟ್ಟಿ, ಕೃಷ್ಣ ಕುಲಾಲ್ ಮಾತನಾಡಿದರು. ಬ್ರಹ್ಮಾವರ ವೃತ್ತ ನಿರೀಕ್ಷಕ ಕೆ.ಸಿ.ಪೂವಯ್ಯ ವಂದಿಸಿದರು. ಶಿಕ್ಷಕ ಪ್ರಕಾ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.