ಎ.8ರಿಂದ ಶ್ರೀನಿವಾಸ್ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಜಾಗೃತಿ ಸಪ್ತಾಹ
ಮಂಗಳೂರು, ಎ.5: ವಿಶ್ವ ಆರೋಗ್ಯ ದಿನದ ಅಂಗವಾಗಿ ಶ್ರೀನಿವಾಸ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆ್ಯಂಡ್ ರಿಸರ್ಚ್ ಸೆಂಟರ್ ಮುಕ್ಕಾದಲ್ಲಿರುವ ಶ್ರೀನಿವಾಸ ಆಸ್ಪತ್ರೆಯಲ್ಲಿ ಎ. 8ರಿಂದ 13ರ ತನಕ ಆರೋಗ್ಯ ಜಾಗೃತಿ ಸಪ್ತಾಹವನ್ನು ಹಮ್ಮಿಕೊಂಡಿದೆ.
ಸಪ್ತಾಹದ ಅವಧಿಯಲ್ಲಿ ಆಸ್ಪತ್ರೆಯು ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಹೊರ ರೋಗಿಗಳಿಗೆ ಉಚಿತ ಸಮಾಲೋಚನೆ ನೀಡಲಿದೆ. ಅಗತ್ಯವಿದ್ದರೆ ರಿಯಾಯಿತಿ ದರದಲ್ಲಿ ಚಿಕಿತ್ಸೆ, ಔಷಧಿ, ರೋಗ ತಪಾಸಣೆಯನ್ನು ಒದಗಿಸಲಾಗುವುದು. ಎ.7ರಂದು ವಿಶ್ವ ಆರೋಗ್ಯ ದಿನವನ್ನು ಆಚರಿಸಲಾ ಗುತ್ತಿದ್ದು, ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿಯನ್ನು ಉತ್ತೇಜಿಸುವುದು ಆರೋಗ್ಯ ಜಾಗೃತಿ ಸಪ್ತಾಹದ ಪ್ರಮುಖ ಉದ್ದೇಶವಾಗಿದೆ.
ಆರೋಗ್ಯಕ್ಕೆ ಸಂಬಂಧಿಸಿದಂತೆ ಇರುವ ಅನುಮಾನಗಳನ್ನು ಸ್ಪಷ್ಟಪಡಿಸುವುದು ಮತ್ತು ಸಮಾಜದ ದುರ್ಬಲ ವರ್ಗಗಳಿಗೆ ಆರೋಗ್ಯದ ಅಗತ್ಯತೆಗಳ ಒದಗಿಸಲು ಇದೊಂದು ಅವಕಾಶ. ಆಸಕ್ತಿ ಇರುವವರು ಆಸ್ಪತ್ರೆಯ ಹೊರರೋಗಿ ವಿಭಾಗವನ್ನು ಬೆಳಗ್ಗೆ 9ರಿಂದ ಸಂಜೆ 5ರ ತನಕ ಭೇಟಿ ಮಾಡುವ ಮೂಲಕ ಸೌಲಭ್ಯವನ್ನು ಪಡೆಯಬಹುದು ಎಂದು ಪ್ರಕಟನೆ ತಿಳಿಸಿದೆ.