ಗೇರುಬೀಜ ಕಾರ್ಖಾನೆಯಲ್ಲಿ ಸ್ವೀಪ್ ಕಾರ್ಯಕ್ರಮ
ಉಡುಪಿ, ಎ.8: ಕಳತ್ತೂರು ಸಂತೆಕಟ್ಟೆಯಲ್ಲಿರುವ ಗೇರುಬೀಜ ಕಾರ್ಖಾನೆ ಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಜಾಗೃತಿ ಅಭಿಯಾನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ನೌಕರರಿರುವ ಕಾರ್ಖಾನೆಯಲ್ಲಿ ಮತದಾನ ಮಹತ್ವ ಕುರಿತಂತೆ ಎಲ್ಲರಿಗೂ ಅರಿವು ಮೂಡಿಸಿ, ಮತದಾರರ ಪ್ರತಿಜ್ಞಾ ವಿಧಿ ಯನ್ನು ಬೋಧಿಸಲಾಯಿತು.
ಜಿಲ್ಲಾ ಚುನಾವಣಾ ವೀಕ್ಷಕ ಕೃಷ್ಣ ಕುನಾಲ್, ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿಪಂ ಸಿಇಓ ಸಿಂಧೂ ಬಿ.ರೂಪೇಶ್, ಉಡುಪಿ ತಾಪಂ ಕಾರ್ಯ ನಿರ್ವಹಣಾಧಿಕಾರಿ ರಾಜು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿವಿ ಪ್ಯಾಟ್ ಕುರಿತು ಪ್ರಾತ್ಯಕ್ಷಿಕೆಯೂ ಇದೇ ವೇಳೆ ನಡೆಯಿತು.
Next Story