ಮತಯಂತ್ರದಲ್ಲಿ ಅಭ್ಯರ್ಥಿಗಳ ಹೆಸರು ಅಳವಡಿಸುವ ಕಾರ್ಯ ಆರಂಭ: ಹೆಪ್ಸಿಬಾರಾಣಿ ಕೊರ್ಲಪಾಟಿ
ಉಡುಪಿ, ಎ.9: ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅ್ಯರ್ಥಿಗಳ ಹೆಸರನ್ನು ಇವಿಎಂ ಮತ್ತು ವಿವಿ ಪ್ಯಾಟ್ಗಳಲ್ಲಿ ಅಳವಡಿಸುವ ಕಾರ್ಯ ಇಂದಿನಿಂದ ಆರಂಭಿಸಲಾಗಿದೆ ಎಂದು ಉಡುಪಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಪು ಮತ್ತು ಉಡುಪಿ ವಿಧಾನಸಭಾ ಕ್ಷೇತ್ರದ ಇವಿಎಂ ಮತ್ತು ವಿವಿ ಪ್ಯಾಟ್ಗಳಲ್ಲಿ ಅಭ್ಯರ್ಥಿಗಳ ಹೆಸರನ್ನು ಅಳವಡಿ ಸುವ ಕಾರ್ಯವನ್ನು ರಾಜಕೀಯ ಪಕ್ಷಗಳು, ಅ್ಯರ್ಥಿಗಳು ಮತ್ತು ಅವರ ಪ್ರತಿನಿಧಿಗಳು ಸಮ್ಮುಖದಲ್ಲಿ ಬಿಇಎಲ್ನ ಇಂಜಿನಿಯರ್ಗಳು, ಸಹಾಯಕ ಚುನಾವಣಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ ನಡೆಸಲಾಗುತ್ತಿದೆ ಎಂದರು.
ಚುನಾವಣಾ ಕಾರ್ಯಕ್ಕಾಗಿ 956 ಮತಗಟ್ಟೆ ಚುನಾವಣಾಧಿಕಾರಿ, 956 ಸಹಾಯಕ ಮತಗಟ್ಟೆ ಚುನಾವಣಾಧಿಕಾರಿ, 1912 ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಿದ್ದು, ಈಗಾಗಲೇ 2 ಹಂತದ ತರಬೇತಿಯನ್ನು ನೀಡಲಾಗಿದೆ. 250 ಮೈಕ್ರೋ ವೀಕ್ಷಕರನ್ನು ನೇಮಕ ಮಾಡಿದ್ದು, ಅವರಿಗೆ ಎ.10ರಂದು ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಅವರು ಹೇಳಿದರು.
ಬೈಂದೂರು ಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 25 ಸಖಿ ಕೇಂದ್ರಗಳನ್ನು ತೆರೆಯಲಾಗುವುದು. ಇದರಲ್ಲಿ ಮಹಿಳಾ ಸಿಬ್ಬಂದಿಗಳೇ ಕಾರ್ಯನಿರ್ವಹಿಸಲಿ ರುವರು. ಅದೇರೀತಿ 2 ಅಂಗವಿಕಲ ಮತಗಟ್ಟೆ ಮತ್ತು 1 ಬುಡಕಟ್ಟು ಮತಗಟ್ಟೆ ಯನ್ನು ತರೆಯಲಾಗುವುದು. ಜಿಲ್ಲೆಯ 70 ಸೂಕ್ಷ್ಮ ಮತಗಟ್ಟೆಗಳಲ್ಲಿ ವೆಬ್ ಕ್ಯಾಸ್ಟಿಂಗ್ ಅಳವಡಿಸಲಾುವುದು ಎಂದು ಅವರು ತಿಳಿಸಿದರು.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ 648885 ಮತದಾರರಿಗೆ ಪೋಟೋ ವೋಟರ್ ಸ್ಲಿಪ್ ವಿತರಿಸಲಾಗಿದ್ದು, ಉಳಿದ 131503 ಮತದಾರರಿಗೆ ಮುಂದಿನ ಎರಡು ದಿನಗಳಲ್ಲಿ ವಿತರಿಸಲಾಗುವುದು. ಮತದಾನ ದಿನ ಅಗತ್ಯ ಇರುವ ಎಲ್ಲ ಸಾಮಾಗ್ರಿಗಳನ್ನು ಮತಗಟ್ಟೆಗಳಿಗೆ ಸರಬರಾಜು ಮಾಡಲು ತಯಾರಿ ನಡೆಸ ಲಾಗಿದೆ ಎಂದರು.
ಚುನಾವಣಾ ಪೂರ್ವ ತಯಾರಿಯ ಹಿನ್ನೆಲೆಯಲ್ಲಿ ಮತಗಟ್ಟೆಗಳ ದುರಸ್ತಿಗಾಗಿ ಈಗಾಗಲೇ ಸರಕಾರದಿಂದ 48.91ಲಕ್ಷ ರೂ. ಬಿಡುಗಡೆಯಾಗಿದ್ದು, ಮತಗಟ್ಟೆ ಗಳಲ್ಲಿ ಮತದಾರರಿಗೆ ಅನುಕೂಲವಾಗುಲ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಅವರು ಹೇಳಿದರು.
ಈವರೆಗೆ ಒಟ್ಟು 13 ಪ್ರಕರಣಗಳಲ್ಲಿ 23,50,290 ನಗದು ಹಣ ವಶಪಡಿಸಿ ಕೊಂಡಿದ್ದು, ಸಮರ್ಪಕ ದಾಖಲೆ ನೀಡಿದ ನಂತರ ಅವುಗಳನ್ನು ಮರಳಿ ನೀಡಲಾಗಿದೆ. ಪೊಲೀಸ್ ತ್ತು ಅಬಕಾರಿ ಇಲಾಖೆಯ ಮೂಲಕ 15821.56 ಲೀಟರ್ ಮದ್ಯ ವಶಪಡಿಸಿಕೊಂಡಿದ್ದು, 3 ಟ್ರಕ್, 4 ದ್ವಿಚಕ್ರ ವಾಹನ ಸೇರಿದಂತೆ ಒಟ್ಟು 2,64,26,999ರೂ. ವೌಲ್ಯದ ವಾಹನ ಮತ್ತು ವಸ್ತುಗಳನ್ನು ವಶಪಡಿಸಿ ಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಚುನಾವಣಾ ವೆಚ್ಚ ವೀಕ್ಷಕ ಸಚಿನ್ ಕಾಮತ್, ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ 3695 ಶಸತ್ಸಾಸ್ತ್ರ ಠೇವಣಿ
ಚುನಾವಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ 3695 ಶಸತ್ಸಾಸ್ತ್ರಗಳನ್ನು ಠೇವಣಿ ಇರಿಸಲಾಗಿದ್ದು, ಬ್ಯಾಂಕ್, ಜ್ಯುವೆಲ್ಲರ್ಸ್ ಸೇರಿದಂತೆ ಅಗತ್ಯ ಇರುವ 9 ಶಸ್ತ್ರಾಸ್ತ್ರ ಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಹೆಫ್ಸಿಬಾ ರಾಣಿ ಕೊರ್ಲ ಪಾಟಿ ತಿಳಿಸಿದರು.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 7,80,388 ಮತದಾರರಿದ್ದು, ಕುಂದಾಪುರ ಕ್ಷೇತ್ರದಲ್ಲಿ 203273, ಉಡುಪಿ 209499, ಕಾಪು 184097, ಕಾರ್ಕಳ ಕ್ಷೇತ್ರ ದಲ್ಲಿ 183519 ಮತದಾರರಿದ್ದಾರೆ ಎಂದು ಅವರು ಮಾಹಿತಿ ನೀಡಿದರು.