ಎ.11ರಿಂದ ಶಕ್ತಿ ಶಾಲೆಯಲ್ಲಿ ಬೇಸಿಗೆ ಶಿಬಿರ ಆರಂಭ
ಮಂಗಳೂರು, ಎ.10: ಇಲ್ಲಿನ ಶಕ್ತಿನಗರದಲ್ಲಿರುವ ಶಕ್ತಿ ವಸತಿ ಶಾಲೆಯಲ್ಲಿ ಎ.11ರಂದು ಬೇಸಿಗೆ ಶಿಬಿರ ಉದ್ಘಾಟನೆಗೊಳ್ಳಲಿದೆ.
ಬೆಸೆಂಟ್ ಮಹಿಳಾ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೆ.ದೇವಾನಂದ ಪೈ ‘ಶಕ್ತಿ ಕ್ಯಾನ್ ಕ್ರಿಯೇಟ್-2019’ ಶಿಬಿರವನ್ನು ಉದ್ಘಾಟಿಸಲಿದ್ದು, ಪ್ರಸಿದ್ಧ ಜನಪದ ವಿದ್ವಾಂಸ ರಮೇಶ್ ಕಲ್ಮಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಪಾಲಕೃಷ್ಣ ದೇವಸ್ಥಾನದ ಆಡಳಿತ ಮೊಕ್ತೇಸ ಕೆ.ಸಿ ನಾಕ್ ವಹಿಸುವರು ಎಂದು ಶಕ್ತಿ ಶಾಲಾ ಪ್ರಧಾನ ಸಲಹೆಗಾರ ರಮೇಶ ಕೆ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story