ಉಡುಪಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಮಾಹಿತಿ: 14 ಪ್ರಕರಣಗಳಲ್ಲಿ 24.5 ಲಕ್ಷ ರೂ. ನಗದು ವಶ
ಉಡುಪಿ, ಎ.12: ಉಡುಪಿ ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆ ಘೋಷಣೆಯಾಗಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದ ಕ್ಷಣದಿಂದ ಇದುವರೆಗೆ ಒಟ್ಟು 14 ಪ್ರಕರಣಗಳಲ್ಲಿ, 24,59,290ರೂ. ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಇದರಲ್ಲಿ 23,50,290 ರೂ.ಗಳನ್ನು ಸಮರ್ಪಕ ದಾಖಲೆ ಪಡೆದು ಬಿಡುಗಡೆಗೊಳಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅಬಕಾರಿ ಇಲಾಖೆ ಜಿಲ್ಲೆಯಲ್ಲಿ 15,845.03ಲೀ. ಮದ್ಯ ವಶಪಡಿಸಿ ಕೊಂಡಿದ್ದು, ಇದರ ಮೌಲ್ಯ 64,39,144 ರೂ. ಆಗಿದೆ. ಈ ಸಂಬಂದ 3 ಟ್ರಕ್, 3 ದ್ವಿಚಕ್ರ ವಾಹನಗಳನ್ನೂ ವಶಕ್ಕೆ ತೆಗೆದುಕೊಳ್ಳಲಾಗಿದೆ. 30 ಟನ್ ಅಕ್ಕಿ ಸೇರಿದಂತೆ ಒಟ್ಟು ಎಲ್ಲಾ ಪ್ರಕರಣಗಳ ಒಟ್ಟು ಮೊತ್ತ 1,99,97,185 ರೂ. ಆಗಿದೆ. ಪೊಲೀಸ್ ಇಲಾಖೆ ವತಿಯಿಂದ 6,107ರೂ.ಮೊತ್ತದ 11.7ಲೀ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.
ಮಾದರಿ ನೀತಿ ಸಂಹಿತೆ ಉಲ್ಲಂಘನೆ ಕುರಿತಂತೆ 153 ದೂರುಗಳನ್ನು ಸ್ವೀಕರಿ ಸಿದ್ದು, 146 ದೂರುಗಳನ್ನು ವಿಲೇ ಮಾಡಲಾಗಿದೆ. 7 ಬಾಕಿ ಇದೆ. ಸುವಿಧಾ ಏಕ ಗವಾಕ್ಷಿ ಅನುಮತಿ ವ್ಯವಸ್ಥೆ ಮೂಲಕ ವಿವಿಧ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳ ಒಟ್ಟು 168 ಅರ್ಜಿ ಸ್ವೀಕರಿಸಿದ್ದು, 145 ಅರ್ಜಿಗೆ ಅನುಮತಿ ನೀಡಲಾಗಿದೆ. 17 ಅರ್ಜಿಗಳು ತಿರಸ್ಕೃತಗೊಂಡಿದ್ದು, 6 ಅನುಮತಿಗೆ ಬಾಕಿ ಇವೆ ಎಂದು ಮಾಹಿತಿಯಲ್ಲಿ ತಿಳಿಸಲಾಗಿದೆ.
ವಾಹನ ಅನುಮತಿಗಾಗಿ 38 ಅರ್ಜಿ ಸ್ವೀಕರಿಸಿದ್ದು, ಇದರಲ್ಲಿ 35ಕ್ಕೆ ಅನುಮತಿ ನೀಡಲಾಗಿದೆ. 2ನ್ನು ತಿರಸ್ಕೃರಿಸಿದ್ದು, ಒಂದು ಅನುಮತಿಗೆ ಬಾಕಿ ಇದೆ. ಸಿವಿಜಿಲ್ ಆಪ್ ಮೂಲಕ ಈವರೆಗೆ 168 ದೂರುಗಳನ್ನು ಸ್ವೀಕರಿಸಿದ್ದು, ಇವುಗಳನ್ನು ಪರಿಶೀಲಿಸಿ ವಿಲೆವಾರಿ ಮಾಡಲಾಗಿದೆ. 39 ಡಮ್ಮಿ ಕೇಸ್ ಆಗಿದ್ದು, 130 ಸರಿಯಾದ ಪ್ರಕರಣಗಳಲ್ಲಿ 118 ಪ್ರಕರಣಗಳನ್ನು 100 ನಿಮಿಷಗಳ ಒಳಗೆ ವಿಲೇವಾರಿ ಮಾಡಲಾಗಿದೆ.
ಜಿಲ್ಲೆಯಲ್ಲಿ 8154 ಅಂಗವಿಕಲ ಮತದಾರರನ್ನು ಗುರುತಿಸಲಾಗಿದ್ದು, ಅವರಿಗಾಗಿ ಮತಗಟ್ಟೆಯಲ್ಲಿ ಸಹಾಯ ಕೇಂದ್ರ, ಶೌಚಾಲಯ ವ್ಯವಸ್ಥೆ, ವೀಲ್ಚೇರ್ ವ್ಯವಸ್ಥೆ, ವಾಹನ ಪಾರ್ಕಿಂಗ್ ವ್ಯವಸ್ಥೆ, ಮ್ಯಾಗ್ನಿಪೈಡ್ ಗ್ಲಾಸ್, ಆದ್ಯತೆಯ ಮೇಲೆ ಮತದಾನ ಮಾಡಲು ವ್ಯವಸ್ಥೆ ಮಾಡಲಾಗಿದೆ. ಹಿರಿಯ ನಾಗರಿಕರಿಗೆ ಸಹ ಎಲ್ಲಾ ರೀತಿಯ ಅಗತ್ಯ ಸೌಲಭ್ಯ ಒದಗಿಸಲು ಕ್ರಮಕೈಗೊಳ್ಳಲಾಗಿದೆ.
ಮತದಾರರ ಸಹಾಯವಾಣಿ 1950ರ ಮೂಲಕ 1462 ಕರೆಗಳನ್ನು ಸ್ವೀಕರಿಸಿದ್ದು, ಅಗತ್ಯ ಮಾಹಿತಿ ಹಾಗೂ ಸಹಾಯ ನೀಡಲಾಗಿದೆ. ಮತಯಂತ್ರಗಳಲ್ಲಿ ಅಭ್ಯರ್ಥಿಗಳ ಹೆಸರು ಸೇರ್ಪಡೆ ಕಾರ್ಯ ಮುಕ್ತಾಯ ಗೊಂಡಿದ್ದು, ಹೆಸರು ಸೇರ್ಪಡೆಯ ಬಳಿಕ ಮತಯಂತ್ರಗಳ ಕಾರ್ಯ ವೈಖರಿ ಯನ್ನು ಪರೀಕ್ಷಿಸಿ, ಖಚಿತಪಡಿಸಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ 865 ಮತಗಟ್ಟೆಗಳನ್ನು ಸಂಬಂದಪಟ್ಟ ಸಹಾಯಕ ಚುನಾವಣಾಧಿ ಕಾರಿ, ಸೆಕ್ಟರ್ಅಧಿಕಾರಿ, ತಹಶೀಲ್ದಾರ್ ಅವರಿಂದ ಪರಿಶೀಲನೆ ನಡೆಸಿ, ಅಗತ್ಯ ವಿರುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನು, ಚುನಾವಣಾ ಆಯೋಗದ ನಿರ್ದೇಶನದಂತೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.