ತೆಂಕನಿಡಿಯೂರು ಕಾಲೇಜಿನಲ್ಲಿ ವಿಶೇಷ ಉಪನ್ಯಾಸ
ಉಡುಪಿ, ಎ.12: ತೆಂಕನಿಡಿಯೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಮಹಿಳಾ ದೌರ್ಜನ್ಯ ತಡೆ ಮತ್ತು ಕ್ಷೇಮಾಭಿವೃದ್ಧಿ ಸಮಿತಿ ಹಾಗೂ ಐಕ್ಯೂಎಸಿ ಘಟಕದ ವತಿಯಿಂದ ಕೆಲಸ ಮಾಡುವ ಸ್ಥಳಗಳಲ್ಲಿ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ಕಿರುಕುಳ (ಅಧಿನಿಯಮ 2013) ಎನ್ನುವ ವಿಷಯದ ಕುರಿತು ವಿಶೇಷ ಉಪನ್ಯಾಸ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿಯ ನ್ಯಾಯವಾದಿ ಪ್ರಿಯಾಂಕ ಸುಮನ್ ರೋಡ್ರಿಗಸ್ ವಿದ್ಯಾರ್ಥಿಗಳಿಗೆ ಉಪಯುಕ್ತವಾದ ಮಾಹಿತಿ ಹಾಗೂ ಅದನ್ನು ತಡೆಯುವ ಕುರಿತು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ಬಾಲಕೃಷ್ಣ ಎಸ್. ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಚಾಲಕ ಡಾ. ಸುರೇಶ ರೈ ಕೆ., ಮಹಿಳಾ ದೌರ್ಜನ್ಯ ತಡೆ ಮತ್ತು ಕ್ಷೇಮಾಭಿವೃದ್ಧಿ ಸಮಿತಿ ಸಂಚಾಲಕಿ ಪ್ರೊ. ಮೇವಿ ಮಿರಾಂದ, ಕನ್ನಡ ವಿಭಾಗದ ಪ್ರಾಧ್ಯಾಪಕಿ ಪ್ರೊ.ರತ್ನಮಾಲ ಉಪಸ್ಥಿತರಿದ್ದರು.
ಎಂಕಾಂ ವಿಭಾಗದ ರೋಜಾ ಸ್ವಾಗತಿಸಿ, ವಿನೀತಾ ವಂದಿಸಿದರು. ಎಂಎ ಇಂಗ್ಲಿಷ್ ವಿಭಾಗದ ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು.
Next Story