ಶಿವಪುರದಲ್ಲಿ ಪ್ರಮೋದ್ ಮಧ್ವರಾಜ್ ಮತಯಾಚನೆ
ಹೆಬ್ರಿ, ಎ.12: ಶಿವಪುರ ಕಾಂಗ್ರೆಸ್ ಸಮಿತಿಯ ವತಿಯಿಂದ ಶುಕ್ರವಾರ ಪಕ್ಷದ ಸ್ಥಳೀಯ ಕಾರ್ಯಕರ್ತರ ಸಭೆ ನಡೆಯಿತು. ಇದರಲ್ಲಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಭಾಗವಹಿಸಿದ್ದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ಗೋಪಾಲ ಭಂಡಾರಿ, ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ, ಕಾಂಗ್ರೆಸ್ ನಾಯಕ ನೀರೆ ಕೃಷ್ಣ ಶೆಟ್ಟಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಉದಯ ಕುಮಾರ ಶೆಟ್ಟಿ, ಶಿವಪುರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಗನ್ನಾಥ ಕುಲಾಲ್, ನಾಯಕರಾದ ಸುಂದರ ಹೆಗ್ಡೆ, ವಿಶ್ವನಾಥ ನಾಯಕ್, ಶಂಕರ ಶೆಟ್ಟಿ, ಮಂಜುನಾಥ ಭಟ್ ಮತ್ತಿತರರು ಉಪಸ್ಥಿತರಿದ್ದರು.
ಗುರುವಾರದಂದು ಪ್ರಮೋದ್ ಮಧ್ವರಾಜ್ ಅವರು ಕುಂದಾಪುರ ಆಸುಪಾಸಿನಲ್ಲಿ ಮತಯಾಚನೆ ನಡೆಸಿದರು. ಕೋಟದ ಜನತಾ ಫಿಶ್ಮಿಲ್ ಅವರು ಅಲ್ಲಿನ ಕಾರ್ಮಿಕರನ್ನು ಭೇಟಿಯಾಗಿ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್, ಫಿಶ್ ಮಿಲ್ ಮಾಲಕ ಆಂದ ಸಿ.ಕುಂದರ್ ಉಪಸ್ಥಿತರಿದ್ದರು.