ಚೂರಿಯಿಂದ ಇರಿತ: ಗಾಯಗೊಂಡಿದ್ದ ವ್ಯಕ್ತಿ ಸಾವು
ಉಳ್ಳಾಲ: ಕೋಳಿ ಬಾಲ್ನಿಂದ ಇರಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಉಳ್ಳಾಲ ಬಂಡಿಕೊಟ್ಯ ನಿವಾಸಿ ನಿತಿನ್ ಜೋಗಿ (35) ಮೃತರು ಎಂದು ಗುರುತಿಸಲಾಗಿದೆ.
ಮೊಗವೀರ ಪಟ್ಣ ನಿವಾಸಿ ರಜನೀಶ್ ಬಂಧಿತ ಆರೋಪಿಯಾಗಿದ್ದು, ಈತ ಎ. 7ರಂದು ಕ್ಷುಲಕ ವಿಚಾರಕ್ಕೆ ವಾಗ್ವಾದ ನಡೆದು ಬಳಿಕ ರಜನೀಶ್ ಕೋಳಿಯ ಬಾಲ್ನಿಂದ ನಿತಿನ್ ಹೊಟ್ಟೆಗೆ ತಿವಿದಿದ್ದ ಎನ್ನಲಾಗಿದೆ. ಇದರಿಂದ ಗಾಬರಿಗೊಂಡ ನಿತಿನ್ ಉಳ್ಳಾಲ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿದ್ದ. ಅಲ್ಲಿ ಕೂಡಲೇ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಲು ತಿಳಿಸಿದ್ದರು. ಬಳಿಕ ಮಂಗಳೂರಿನ ಆಸ್ಪತ್ರೆಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಎ.10ರಂದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Next Story