ಕಾಂಗ್ರೆಸ್ ಚುನಾವಣಾ ಪ್ರಚಾರ: ಎ.14ರಂದು ಮಂಗಳೂರಿಗೆ ಚಿತ್ರನಟ ಶತ್ರುಘ್ನ ಸಿನ್ಹಾ
ಮಂಗಳೂರು, ಎ.13: ಖ್ಯಾತ ಹಿಂದಿ ಚಿತ್ರನಟ, ಕೇಂದ್ರದ ಮಾಜಿ ಸಚಿವ ಶತ್ರುಘ್ನ ಸಿನ್ಹಾ ಎ.14ರಂದು ಸಂಜೆ 6 ಗಂಟೆಗೆ ನಗರದ ಕದ್ರಿ ಮೈದಾನದಲ್ಲಿ ಸಾರ್ವಜನಿಕರನ್ನು ಉದ್ದೇಶಿಸಿ ಕಾಂಗ್ರೆಸ್ ಚುನಾವಣಾ ಪ್ರಚಾರ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮಿಥುನ್ ರೈ ಹಾಗೂ ಮುಖಂಡರು ಭಾಗವಹಿಸಲಿದ್ದಾರೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮಾಜಿ ಶಾಸಕ ಜೆ.ಆರ್.ಲೋಬೊ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story