ಕೋಡಿ: ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮತದಾರರ ಪ್ರತಿಜ್ಞಾವಿಧಿ
ಕುಂದಾಪುರ, ಎ.16: ಸರಿಸುಮಾರು 130 ಕೋಟಿ ಜನಸಂಖ್ಯೆಯುಳ್ಳ ತೊಂಬತ್ತು ಲಕ್ಷಕ್ಕೂ ಮೀರಿ ಮತದಾರರಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದು. ಪ್ರಜಾಸತ್ತೆಯ ವ್ಯವಸ್ಥೆಯನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಆದ್ದರಿಂದ ದೇಶವನ್ನು ಅಭಿವೃದ್ಧಿ ಪಥದತ್ತ ಮುನ್ನಡೆಸಬಲ್ಲ ಸುಂದರ ಭಾರತದ ಕನಸನ್ನು ಸಾಕಾರಗೊಳಿಸಬಲ್ಲ ಯೋಗ್ಯ ವ್ಯಕ್ತಿಯನ್ನು ಆಯ್ಕೆ ಮಾಡಬಲ್ಲ ಗುರುತರ ಹೊಣೆಗಾರಿಕೆ ನಮ್ಮ ಮೇಲಿದೆ ಎಂದು ಡಾ.ಸುಧಾಕರ ದೇವಾಡಿಗ ಹೇಳಿದ್ದಾರೆ.
ಕೋಡಿಯ ಬ್ಯಾರೀಸ್ ಶಿಕ್ಷಣ ಮಹಾವಿದ್ಯಾಲಯದಲ್ಲಿ ಮತದಾರರ ಪ್ರತಿಜ್ಞಾವಿಧಿ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು.
ಈ ಸಂದರ್ಭ ಬಿ.ಎಡ್ ಪ್ರಶಿಕ್ಷಣಾರ್ಥಿಗಳಿಗೆ ಮತದಾರ ಪ್ರತಿಜ್ಞಾವಿಧಿ ಭೋದಿಸಲಾಯಿತು. ಪ್ರಾಚಾರ್ಯ ಕೆ.ಸಿದ್ದಪ್ಪಪ್ರಾಸ್ತಾವಿಕವಾಗಿ ಮಾತನಾಡಿ, ಯಾವುದೇ ಒತ್ತಡ, ದಾಕ್ಷಿಣ್ಯ, ಹಣದ ಆಮಿಷಕ್ಕೆ ಬಲಿಯಾಗದೇ, ಮುಕ್ತವಾಗಿ ಮತ ಚಲಾಯಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಡಿ.ಎಡ್. ಕಾಲೇಜಿನ ಪ್ರಾಚಾರ್ಯ ಫಿರ್ದೌಸ್ ಉಪಸ್ಥಿತರಿದ್ದರು. ಅಬ್ದುರ್ರಹ್ಮಾನ್ ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕ ಉಮೇಶ್ ಎನ್. ಸ್ವಾಗತಿಸಿದರು. ಪ್ರಿಯಾ ವಂದಿಸಿದರು. ಜೆ. ಅನಂತ ಭಟ್ ಕಾರ್ಯಕ್ರಮ ನಿರೂಪಿಸಿದರು